ರಾಜ್ಯ

ಧಾರವಾಡದ ಬೋಗೂರ, ಮಾದನಭಾವಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ಧಾರವಾಡ prajakiran.com : ಧಾರವಾಡ ತಾಲೂಕಿನ ಬೋಗೂರ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ  ಬಾಲಕಿಯ ಮನೆಗೆ ಹಾಗೂ ಮಾದನಭಾವಿ ಪ್ರಕರಣದ ಸಂತ್ರಸ್ತರ ಮನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಇಂದು ಭೇಟಿ ನೀಡಿ  ಬಾಲಕಿಯ ಕುಟುಂಬದ ಅಳಲು ಆಲಿಸಿ, ಆತ್ಮಸ್ಥೈರ್ಯ ತುಂಬಿದರು.

ಬೋಗೂರಿನಲ್ಲಿ ಮೃತ ಬಾಲಕಿಯ ತಾಯಿ, ತಂದೆ, ಮಗಳ ದುಸ್ಥಿತಿ ಮತ್ತು ಆತ್ಮಹತ್ಯೆಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದರು.

ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಮಾತನಾಡಿ,  ಧಾರವಾಡ ತಾಲೂಕಿನ ಬೋಗೂರ ಮತ್ತು ಮಾದನಭಾವಿ ಗ್ರಾಮಗಳಲ್ಲಿ ಪ್ರತ್ಯೇಕವಾಗಿ ನಡೆದಿರುವ ಎರಡು ವಿಕೃತ ಕೃತ್ಯಗಳಲ್ಲಿ ನೊಂದ ಕುಟುಂಬಗಳೊಂದಿಗೆ ಆಯೋಗ,ಸರ್ಕಾರ ಇದೆ.

ಸೂಕ್ತ ಕಾನೂನು ನೆರವು, ಆಪ್ತ ಸಮಾಲೋಚನೆಯ ಮೂಲಕ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸಲಾಗುವುದು.ಕುಟುಂಬದ ಸದಸ್ಯರು ಧೃತಿಗೆಡಬಾರದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮಾತನಾಡಿ, ನೊಂದ ಕುಟುಂಬದ ಭದ್ರತೆಯ ಜವಾಬ್ದಾರಿ ಪೊಲೀಸ್ ಇಲಾಖೆಗೆ ಸೇರಿದೆ.

ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ. ಮಾದನಭಾವಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಸಹ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.ಇನ್ನುಳಿದ ಆರೋಪಿಗಳನ್ನು ಕೂಡಲೇ ವಶಕ್ಕೆ ಪಡೆಯಲಾಗುವುದು ಎಂದರು.

ಬೋಗೂರಿನ ಬಾಲಕಿಯ ಕುಟುಂಬಕ್ಕೆ ತುರ್ತು ವೆಚ್ಚವಾಗಿ 10 ಸಾವಿರ ರೂಪಾಯಿಗಳ ನೆರವಿನ ಚೆಕ್ ಹಸ್ತಾಂತರಿಸಲಾಯಿತು.

ಮೃತ ಬಾಲಕಿಯ ಪಾಲಕರು ಮತ್ತು ಕುಟುಂಬದ ಸದಸ್ಯರು ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು ಎಂದರು.

ಮಾಜಿ ಶಾಸಕಿ ಸೀಮಾ ಮಸೂತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಡಿವೈಎಸ್ ಪಿ ರವಿ ನಾಯಕ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *