ಹುಬ್ಬಳ್ಳಿ prajakiran.com :
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಗುರುವಾರ ನಡೆದಿದೆ.
ಇದರಿಂದಾಗಿ ಕಚೇರಿ ಕಿಟಕಿ ಗಾಜು ಹಾಗೂ ವಾಹನಗಳು ಜಖಂಗೊಂಡಿವೆ.
ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹಮ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ ಕಲ್ಲುಗಳಿಂದ ಕಚೇರಿ ಕಿಟಕಿ ಹಾಗೂ ಎರಡು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ.
ಇಂದು ಮುಂಜಾನೆ 8.30ಕ್ಕೆ ಪಾಲಿಕೆ ಕಚೇರಿಗೆ ಬೈಕ್ ನಲ್ಲಿ ಬಂದಿದ್ದ ಆರೋಪಿ ಮೊಹಮ್ಮದ್ ಏಕಾಏಕಿ ಕಲ್ಲಿನಿಂದ ದಾಳಿ ಮಾಡಿದ್ದಾನೆ.
ಕೂಡಲೇ ಅಲ್ಲೇ ಇದ್ದ ಸಿಬ್ಬಂದಿ ಉಪನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆಯ ಪೊಲೀಸರು ಆರೋಪಿ ಮೊಹಮ್ಮದ್ ನನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.