ಅಪರಾಧ

ಲಾಕಡೌನ್ ಸಂಕಷ್ಟ : ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ

ಬೆಳಗಾವಿ prajakiran.com : ಲಾಕಡೌನ್ ಸಂಕಷ್ಟಕ್ಕೆ ಸಿಲುಕಿ ನರಳಿದ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ವಡಗಾವಿ ಲಕ್ಷ್ಮೀ ನಾಗರ ನಿವಾಸಿ ಸುಜೀತ ಉಪರಿ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.

ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಜೀತ ಇದಕ್ಕೂ ಮುನ್ನ ಹೆಂಡ್ತಿ ಮಕ್ಕಳನ್ನ ತವರು ಮನೆಗೆ ಕಳುಹಿಸಿದ್ದ ಎಂದು ಗೊತ್ತಾಗಿದೆ.



ಕಳೆದ ವರ್ಷ ಪ್ರವಾಹದಿಂದ ಬಳಲಿದ್ದು, ಆ ಕಹಿ ಘಟನೆ ಮರೆಯುವ ಮುನ್ನವೇ ಈ ವರ್ಷ ಲಾಕಡೌನ್ ಸಂಕಷ್ಟ ದಿಂದ ತತ್ತರಿಸಿ  ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದಲ್ಲದೆ, ಆತ ಮೈತುಂಬ ಸಾಲಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಸಾಲದಿಂದ ತತ್ತರಿಸಿದ್ದ ಸುಜೀತ ಕುಡಿತದ ಚಟಕ್ಕೆ ದಾಸನಾಗಿದ್ದ. 

ಕಳೆದ ತಿಂಗಳು ಮೇ 26 ರಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ. ನಿನ್ನೆ ಮೃತದೇಹದ ದುರ್ವಾಸನೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *