ಅಪರಾಧ

ಧಾರವಾಡದಲ್ಲಿ ಎಂ ಎನ್ ಸಿ ಕಂಪನಿಯ ಉದ್ಯೋಗಿ ಆತ್ಮಹತ್ಯೆಗೆ ಶರಣು

ಧಾರವಾಡ prajakiran. com : ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ರಜತಗಿರಿಯಲ್ಲಿ ನಡೆದಿದೆ.

ಅಭಿಷೇಕ ಮಹಾದೇವಪ್ಪ ಮಾಳಗೆ(26) ಮನೆಯಲ್ಲಿ ರಾತ್ರಿ ನೇಣಿಗೆ ಶರಣಾದ ದುರ್ದೈವಿ ಎಂದು ತಿಳಿದುಬಂದಿದೆ.

ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ಅರಿತು ಘಟನಾ ಸ್ಥಳಕ್ಕೆ ಧಾವಿಸಿದ ವಿದ್ಯಾಗಿರಿ ಪೊಲೀಸರು ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

ಮೃತ ಅಭಿಷೇಕ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯಾಗಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಅಭಿಷೇಕ್ ಮಾಳಗಿ ಎಂಬಿ ಎ ಪದವೀಧರನಾಗಿದ್ದ. ಉತ್ತಮ ಕ್ರಿಕೆಟ್ ಆಟಗಾರನಾಗಿ ಧಾರವಾಡದ ಎಸ್ ಡಿ ಎಂ ಕ್ರಿಕೆಟ್ ಅಕಾಡೆಮಿ ಪರವಾಗಿ ಆಡಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *