ಹುಬ್ಬಳ್ಳಿ prajakiran.com :
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರು ಆಗಿದ್ದ ಸುಧೀರ ಸರಾಫ ಅವರು ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಅವರ ಅಗಲಿಕೆ ಬಿಜೆಪಿ ಮುಖಂಡರಿಗೆ
ಕಾರ್ಯಕರ್ತರಿಗೆ ಅತೀವ ದುಃಖ ತರಿಸಿದೆ.
ಸಾಮಾಜಿಕ ಹಾಗೂ ರಾಜಕೀಯದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ನೀಡಲಿ ಎಂದು ಬಿಜೆಪಿ ಮುಖಂಡರು ಪ್ರಾರ್ಥಿಸಿದ್ದಾರೆ.
ಮೃತರ ಅಂತಿಮ ಯಾತ್ರೆಯು ಮಾ. 25ರಂದು ಗುರುವಾರ ಬೆಳಗ್ಗೆ 9.30 ಗಂಟೆಗೆ ಅವರ ಸ್ವಗ್ರಹದಿಂದ ಹೊರಟು ಕೇಶ್ವಾಪುರ ಮುಕ್ತಿ ಧಾಮದಲ್ಲಿ ನೇರವೇರುವುದು.