ರಾಜ್ಯ

ಜಾನುವಾರು ಸಮೇತ ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದ ರೈತರು

ಸಕ್ಕರೆ ಸಚಿವರ ತವರು ಜಿಲ್ಲೆಯಲ್ಲಿ ಬುಗಿಲೆದ್ದ ಕಬ್ಬು ಬೆಳೆಗಾರರ ಹೋರಾಟ

ಸಚಿವ ಶಂಕರ ಪಾಟೀಲ ಮುನೇನಕೊಪ್ಪಗೆ 24 ಗಂಟೆಗಳ ಗಡುವು ನೀಡಿರೋ ರೈತರು,

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಸೋಮವಾರದಿಂದಲೇ ಧರಣಿ ಆರಂಭಿಸಿರುವ ಕಬ್ಬು ಬೆಳೆಗಾರರು ಇಂದು ಮತ್ತೆ ಜಾನುವಾರು ಸಮೇತ ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದರು.

ಎತ್ತುಗಳ ಜೊತೆ ಕಬ್ಬು ಹಿಡಿದು ಡೊಳ್ಳು ಬಾರಿಸುವ ಮೂಲಕ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆ ವೇಳೆ
ಪೊಲೀಸರು ಹಾಗೂ ರೈತರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಒಳ ಪ್ರವೇಶಕ್ಕೆ ಅನುವು ಮಾಡುವಂತೆ ರೈತರು ಪಟ್ಟು ಹಿಡಿದು ನಿಂತರು.

ಆದರೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಿದ್ದರಿಂದ ಗೇಟ್ ಮುಂಭಾಗದಲ್ಲಿ ತಡೆದರು‌.

ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತವರು ಜಿಲ್ಲೆಯಾಗಿರುವ ಧಾರವಾಡದಲ್ಲಿ ಕಳೆದ ಮೂರು ದಿನಗಳಿಂದ ಉಗ್ರ ಸ್ವರೂಪದ ಪ್ರತಿಭಟನೆ ನಡೆಯುತ್ತಿದ್ದರೂ ಸಚಿವರು ಪ್ರತಿಭಟನಾ ಸ್ಥಳಕ್ಕೆ ಮಾತ್ರ ಬಂದು ಪ್ರತಿಭಟನಾಕಾರರ ಮನವೊಲಿಸುವ ಕೆಲಸ ಮಾಡುತ್ತಿಲ್ಲ ಎಂದು
ರೈತ ಮುಖಂಡ ಕುರಬೂರು ಶಾಂತಕುಮಾರ ಕಿಡಿಕಾರಿದರು

ನಮ್ಮ ಬೇಡಿಕೆಗಳು ಈಡೇರಿಕೆ ಆಗೋವರೆಗೂ ನಮ್ಮ ಹೋರಾಟವನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇನ್ನೊಂದೆಡೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಬರೋವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಅವರು ಕೂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ‌ಅದಕ್ಕೂ ಜಗ್ಗದ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.

ಇನ್ನೂ ಧಾರವಾಡ ಜಿಲ್ಲೆಯಲ್ಲಿ ಒಂದು ಸಕ್ಕರೆ ಕಾರ್ಖಾನೆ ಇಲ್ಲ. ಇಲ್ಲಿ ಪ್ರತಿಭಟನೆ ಮಾಡುವುದು ಎಷ್ಟು ಸರಿ. ರೈತರ ಹಾದಿಯನ್ನು ರೈತ ಮುಖಂಡ ಕುರಬೂರು ಶಾಂತಕುಮಾರ್ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಎಲೆಕ್ಷನ್ ಹೊಸ್ತಿಲಿನಲ್ಲಿ ಈ ರೀತಿ ಪ್ರತಿಭಟನೆ ನಡೆಸುವುದು ಸರಿನಾ. ಈಗಾಗಲೇ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಲು ಆರಂಭಿಸಿವೆ.

ಕೇವಲ 22 ಕಾರ್ಖಾನೆಗಳು ಆರಂಭಿಸಬೇಕಿವೆ. ಇದರ ನಡುವೆ ಈ ಹೋರಾಟ ಎಷ್ಟರ ಮಟ್ಟಿಗೆ ಸರಿ ಎಂದು ಕೇಳಲಾಗುತ್ತಿದೆ.

ರೈತರ ಜೊತೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತುಕತೆ ಮಾಡಲು ಯತ್ನಿಸಿದರು. ನಾಳೆ ಸಂಜೆಯವರೆಗೂ ಹೋರಾಟ ಮಾಡೋದಾಗಿ ರೈತರು ಗಡುವು ನೀಡಿದ್ದಾರೆ.

24 ಗಂಟೆಗಳ ಗಡುವು ನೀಡಿರೋ ರೈತರು, ಸಚಿವ ಮುನೇನಕೊಪ್ಪ ಬರುವವರೆಗೂ ಪ್ರತಿಭಟನೆ ಹಿಂಪಡೆಯದಿರಲು ತೀರ್ಮಾನ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *