ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಭಾನುವಾರ ಒಂದೇ ದಿನ 37,733 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಇಂದು ಕೂಡ ರಾಜ್ಯದಲ್ಲಿ 217 ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಬೆಂಗಳೂರು ನಗರದಲ್ಲಿ 64, ಬಳ್ಳಾರಿ 18, ಚಾಮರಾಜನಗರ 15, ಹಾಸನ 11, ಶಿವಮೊಗ್ಗ 12, ತುಮಕೂರು 13 ಜನ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಆ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 1,60,1865ಗೆ
ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 37,733 ಜನರಲ್ಲಿ ಕೋವಿಡ್ 19 ಸೋಂಕು ದೃಡಪಟ್ಟಿದ್ದು , 21,149 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಈವರೆಗೆ 4,21,436 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ ರಾಜ್ಯದಲ್ಲಿ 16,011 ಜನ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದೆ.
ಇಂದು ಬಾಗಲಕೋಟೆ 691, ಬಳ್ಳಾರಿ 1156,
ಬೆಂಗಳೂರು 21,199 ಬೆಳಗಾವಿಯಲ್ಲಿ 372, ಧಾರವಾಡ ಜಿಲ್ಲೆಯಲ್ಲಿ 741, ಮೈಸೂರಿನಲ್ಲಿ 2750, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 996 ಪ್ರಕರಣಗಳು ಪತ್ತೆಯಾಗಿವೆ.