ಬೆಂಗಳೂರು prajakiran.com : ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್ ವಿಧಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ವಾಪಾಸ್ಸು ಪಡೆದಿದೆ.
ಜನರಿಗೆ ಕರೋನಾ ಹರಡದಂತೆ ಮುಂಜಾಗ್ರತಕ್ರಮವಾಗಿ ಮೇ 31ರಂದು ಭಾನುವಾರ ರಾಜ್ಯಾದ್ಯಂತ ನಿಷೇದಾಜ್ಞೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಧಿಸಿದ್ದರು.
ಇದೀಗ ಜನರ ಒತ್ತಾಯದ ಮೇರೆಗೆ ಅದನ್ನು ವಾಪಾಸ್ಸು ಪಡೆಯುವಂತೆ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇಲೆ ಈ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಈ ನಿಷೇಧಾಜ್ಞೆ ವಾಪಾಸ್ಸು ಪಡೆಯಲಾಗಿದ್ದು, ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಮಾತ್ರ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಮಾರ್ಪಾಡು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಮೇ 31ರಂದು ಭಾನುವಾರ ನಾಳೆ ಎಂದಿನಂತೆ ಎಲ್ಲವೂ ಬೆಳಗ್ಗೆ 7ರಿಂದ ಸಂಜೆ 7ವರೆಗೆ ಓಪನ್ ಇರಲಿದೆ.
ಮದ್ಯದಂಗಡಿ, ಮಾರ್ಕೆಟ್, ಸಂಚಾರ, ಆಟೋ, ಕ್ಯಾಬ್, ಪಾರ್ಕ್ ಯಾವುದಕ್ಕೂ ನಿರ್ಬಂಧ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅಲ್ಲದೆ, ರಾಜ್ಯಾದ್ಯಂತ ರಸ್ತೆ ಸಾರಿಗೆ ಸಂಸ್ಥೆಗಳ ಪ್ರಯಾಣ ಕೂಡ ಎಂದಿನಂತೆ ನಡೆಯಲಿವೆ. ಈ ಬಗ್ಗೆ ನಾಡಿನ ಜನತೆಗೆ ಯಾವುದೇ ಆತಂಕ ಬೇಡ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.