ರಾಜ್ಯ

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಇನ್ನಿಲ್ಲ

ಚಿಕ್ಕಮಗಳೂರು prajakiran.com :
ಹಿರಿಯ ಕ್ರೈಮ್ ವರದಿಗಾರ ಸುನೀಲ್ ಹೆಗ್ಗರವಳ್ಳಿ  ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.

ಹಾಯ್ ಬೆಂಗಳೂರು ವಾರಪತ್ರಿಕೆ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ್ದ ಸುನೀಲ್ ಹೆಗ್ಗರವಳ್ಳಿ ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ ಹೃದಯಾಘಾತವಾಯಿತೆಂದು ಹೇಳಲಾಗುತ್ತಿದೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು.

ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯ ಸಂಪಾದಕನಾಗಿ ಮುನ್ನಡೆಸಿದ್ದರು.

ಹೆಗ್ಗರವಳ್ಳಿ ಅವರು ಒಂದು ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದರು.

ನಂತ್ರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ರು. ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು.

ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *