ರಾಜ್ಯ

ಲಂಚ ಪಡೆದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ದೇಣಿಗೆ ಪಾವತಿ ನೀಡುತ್ತಾರೆಯೇ? ಎಂದು ಕುಟುಕಿದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ

 ಗದಗ prajakiran.com : ನಾಡಿನ ವಿವಿಧ ‘ಮಠ, ಮಂದಿರಗಳಿಗೆ ಭಕ್ತರು ದೇಣಿಗೆ ನೀಡಿದರೆ, ಅದಕ್ಕೆ ಅಲ್ಲಿ ರಶೀದಿ ಕೊಡುತ್ತಾರೆ.

ಆದರೆ, ಲಂಚ ಪಡೆದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ದೇಣಿಗೆ ಪಾವತಿ ನೀಡುತ್ತಾರೆಯೇ?’ ಎಂದು ಲಂಚದ ಬಗ್ಗೆ ದಾಖಲೆ ಕೇಳಿದ ಸಚಿವರಿಗೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ತಿರುಗೇಟು ನೀಡಿದ್ದಾರೆ.

ಅವರು ಶಿರಹಟ್ಟಿಯ ಫಕೀರೇಶ್ವರ ಮಠದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಶ್ರೀ ಮಠಕ್ಕೆ ಮಂಜೂರಾದ ₹75 ಲಕ್ಷ ಅನುದಾನದಲ್ಲಿ ಅಧಿಕಾರಿಗಳು ₹25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕಿಂತ ಹೆಚ್ಚಿನ ದಾಖಲೆಯ ಅವಶ್ಯಕತೆ ಇದೆಯೇ? ಎಂದು ಕುಟುಕಿದರು.

ರಾಜ್ಯದ ಮುಜರಾಯಿ ಇಲಾಖೆ ಹೊರತುಪಡಿಸಿದರೆ ಎಲ್ಲಾ ಇಲಾಖೆಗಳಲ್ಲಿ ಅನುದಾನ ತೆಗೆದುಕೊಳ್ಳಲು ಎಲ್ಲ ಮಠಾಧೀಶರು ಕಮಿಷನ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ, ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲು ಯಾರು ಮುಂದಾಗುತ್ತಿಲ್ಲ. ಅವರನ್ನೆಲ್ಲಾ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ’ ಎಂದು ಫಕೀರ ದಿಂಗಾಲೇಶ್ವರ ಶ್ರೀ ಹೇಳಿದರು.

 ನಿನ್ನೇಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು ಶ್ರೀಗಳ ಬಳಿ ದಾಖಲೆಗಳಿದ್ದರೆ ನೀಡಲಿ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು.

ಅದರ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಆಂದೋಲ ಶ್ರೀ ಕಮಿಷನ್ ಕೇಳಿರುವುದು ಸತ್ಯ ಎಂದು ಹೇಳಿದ್ದರೆ ಕಾಗಿನೆಲೆ ಕನಕ‌ಪೀಠದ ಶ್ರೀ ಕಮಿಷನ್ ನೀಡಿಲ್ಲ ಎಂದು ಪ್ರತಿವಾದ ಮಂಡಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *