ಧಾರವಾಡ prajakiran.com : ಜಿಲ್ಲೆಯಾದ್ಯಂತ ಪ್ರಸ್ತುತ 57 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಅಂತಹ ಪ್ರದೇಶಗಳ ಎಲ್ಲ ನಿವಾಸಿಗಳ ಆರೋಗ್ಯವನ್ನು ನಿರಂತರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಆಶಾ ಕಾರ್ಯಕರ್ತರಿಗೆ ಪಲ್ಸ್, ಆಕ್ಸಿಮೀಟರ್ ಪೂರೈಸಬೇಕು. ಸ್ಯಾನಿಟೈಸರ್,ಥರ್ಮಲ್ ಸ್ಕ್ಯಾನಿಂಗ್ ಮೂಲಕ ನಿವಾಸಿಗಳ ಸಾಮಾನ್ಯ ಆರೋಗ್ಯ ಮಟ್ಟವನ್ನು ದಾಖಲಿಸಿ ಅಗತ್ಯ ಇರುವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದರು. […]