ರಾಜ್ಯ

ಹಂದಿಗಳ ಗೂಡಾಗುತ್ತಿರುವ ಬೆಂಗಳೂರು ನಗರ : ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ನಿಯೋಜಿಸಿ

ಬೆಂಗಳೂರು prajakiran.com : ಬೆಂಗಳೂರು ನಗರದಲ್ಲಿ ಕಸದ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿದ್ದು, ಬಿಬಿಎಂಪಿ ನೇಮಕ ಮಾಡಿಕೊಂಡಿರುವ ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ಮರು ನಿಯೋಜಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಮುಖಂಡರಾದ ಜನನಿ ಭರತ್ ಆಗ್ರಹಿಸಿದರು.  ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾರ್ಷಲ್‌ಗಳನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿದ್ದು ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹಿಡಿದು ದಂಡ ವಿಧಿಸಲು ಹಾಗೂ ಬ್ಲಾಕ್ ಸ್ಪಾಟ್‌ಗಳು ಹೆಚ್ಚಾಗದಂತೆ ನಿಗಾವಹಿಸುವ ಸಲುವಾಗಿ ಆದರೆ, ಬಿಬಿಎಂಪಿ ಈ ಕೆಲಸದಿಂದ ಇವರನ್ನು ವಿಮುಖರನ್ನಾಗಿ ಮಾಡಿ ಜನರ ಸುಲಿಗೆಗೆ ಇಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಕ್ಷ ನಡೆಸಿದ ಸರ್ವೇಕ್ಷಣೆ ಪ್ರಕಾರ ನಗರದಲ್ಲಿ ಸುಮಾರು 1038 ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್ (ಕಸದ ರಾಶಿಗಳು) ಕಂಡು ಬಂದಿವೆ.  ಇದರಿಂದ ಸೊಳ್ಳೆ, ಹಂದಿ, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ, ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಿ, ಅದನ್ನು ಬಿಟ್ಟು ಜನರನ್ನು ದೋಚುವುದುಲ್ಲ  ಎಂದು ವ್ಯಂಗ್ಯವಾಡಿದರು. ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಸರ್ಕಾರ ಹಾಗೂ ಬಿಬಿಎಂಪಿ 198 ಪ್ಯಾಕೇಜ್‌ಳನ್ನು 89 ಇಳಿಸಿರುವ ಕಾರಣ ಕಸ ಸಂಗ್ರಹ ವ್ಯತ್ಯಯವಾಗಿ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿವೆ.  ಈಗಾಗಲೇ ನಗರದಲ್ಲಿ ಡೆಂಗ್ಯೂ, ಚಿಕುನ್‌ಗುನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕಸದ ರಾಶಿಗಳಿಂದ ಸೊಳ್ಳೆ ಉತ್ಪತ್ತಿಯಾಗಿ ಜನ ರೋಗದಿಂದ ನರಳುವಂತೆ ಮಾಡುವುದು ಬಿಬಿಎಂಪಿ ಉದ್ದೇಶವೇ? ಆಯುಕ್ತ ಮಂಜುನಾಥ್ […]

ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಈ ಕುರಿತು […]