ಧಾರವಾಡ prajakiran.com : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಮಂಜುಳಾ ಆಗ್ರಹಿಸಿದ್ದಾರೆ. 2020-2025 ನೇ ಸಾಲಿನ ಅವಧಿಗಾಗಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಚುನಾವಣೆ ಪ್ರಕ್ರಿಯೆ ದೋಷಪೂರಿತವಾಗಿದೆ. ನಿವೃತ್ತ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳಾಗಿ ನೇಮಿಸಿಕೊಂಡಿದ್ದು, ಇಲಾಖೆಗೂ ಅವರಿಗೂ ಸಂಬಂಧವಿಲ್ಲ. ಅವರು ಮನಬಂದಂತೆ ಚುನಾವಣೆ ನಡೆಸುವುದು ಎಷ್ಟರ ಮಟ್ಟಿಗೆ […]
Tag: association
ಗ್ರಾಮೀಣ ಶಿಕ್ಷಕರ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ನಾಗೇಶ
ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳ ತಾಲೂಕಿನ ಶಿಕ್ಷಕ ನಾಗೇಶ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ಗೌರವ ಸಲಹೆಗಾರ ಮಹೇಶ ಜೋಶಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಗೌರವಾಧ್ಯಕ್ಷ ಎಲ್.ಆಯ್.ಲಕ್ಕಮ್ಮನವರ, ಕಾರ್ಯಾಧ್ಯಕ್ಷ ಶರಣಪ್ಪಗೌಡ್ರ, ಕೋಶಾಧ್ಯಕ್ಷ ಎಸ್.ಎಫ್.ಪಾಟೀಲ ಅಭಿನಂದಿಸಿದ್ದಾರೆ. Share on: WhatsApp
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುತ್ತೋಲೆ ಹೊರಡಿಸಿ
ಹುಬ್ಬಳ್ಳಿ prajakiran.com : ರಾಜ್ಯದೆಲ್ಲಡೆ ಇರುವ ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಶೀಘ್ರವೇ ವರ್ಗಾವಣೆ ಸುತ್ತೋಲೆ ಮತ್ತು ವೇಳಾಪಟ್ಟಿಯನ್ನು ಹೊರಡಿಸಬೇಕೆಂದು ಕರ್ನಾಟಕ ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಹಾಗೂ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ಒತ್ತಾಯಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರಿಗೆ ಮನವಿ ಪತ್ರ ಬರೆದಿರುವ ಅವರು, 5 ವರ್ಷಗಳಿಂದ ಒಂದು ಬಾರಿ ಮಾತ್ರ ವರ್ಗಾವಣೆಯಾಗಿರುವುದರಿಂದ ಸಹಸ್ರ ಸಹಸ್ರ ಶಿಕ್ಷಕರು ವರ್ಗಾವಣೆಗೆ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಹೀಗಾಗಿ ತಾವುಗಳು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಅತೀ […]
ಗ್ರಾಮೀಣ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಜಗದೀಶ ಯಾದವ್
ಚಿತ್ರದುರ್ಗ prajakiran.com : ಜಿಲ್ಲೆಯ ಹಿರಿಯೂರ ತಾಲೂಕಿನ ಕರಿಯೋಬನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ ಯಾದವ್ ಅವರನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷರಾದಅಶೋಕ.ಎಮ್.ಸಜ್ಜನ.ರಾಜ್ಯ ಪ್ರ.ಕಾ.ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ಸಂಘದ ಪದಾಧಿಕಾರಿಗಳಾದ ಆರ್.ಎಮ್.ಕಮ್ಮಾರ.ಧರ್ಮಣ್ಣ ಭಜಂತ್ರಿ.ವಾಯ್.ಎಚ್.ಮಾಚೇನಹಳ್ಳಿ.ಈರಣ್ಣ ಸೊರಟೂರ ನಾಗರಾಜ ಆತಡಕರ ಅಭಿನಂದಂದಿಸಿ ಶುಭ ಕೋರಿದ್ದಾರೆ. Share on: WhatsApp
ಶಿಕ್ಷಕರ ಸಂಘದ ಸಹ ಕಾರ್ಯದರ್ಶಿಯಾಗಿ ಸೊಣ್ಣಪ್ಪ ನೇಮಕ
ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ಸಹ ಕಾರ್ಯದರ್ಶಿಯಾಗಿ ಟಿ.ಸೊಣ್ಣಪ್ಪ ನೇಮಕಗೊಂಡಿದ್ದಾರೆ. ಸೋಣ್ಣಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ಅವರು ವಿವಿಧ ಸಾಮಾಜಿಕ ಸೇವಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಟಿ. ಸೊಣ್ಣಪ್ಪ ಇವರನ್ನು ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸಂಘ ಹಾಗೂ ಜಿಲ್ಲಾ ಸಂಘದ […]