ರಾಜ್ಯ

ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ….!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು ಪೋಸ್ಟ್ ಧಾರವಾಡ prajakiran.com : ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತ ಚೌಕಿದಾರ ಮಂಜು ಎಂಬುವರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ವಾಟ್ಸ್ ಅಪ್ ಗಳಲ್ಲಿ ಸಹ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಬಹುಚರ್ಚೆಗೆ ಗ್ರಾಸವಾಗಿದ್ದು, ಅನೇಕರು ಅದಕ್ಕೆ 100% ಸತ್ಯವಾದ ಮಾತು, ಮಂಜು ನಿಮಗೆ ಈಗ ಗೊತ್ತಾಯಿತಾ ಎಂದು ಸಹಮತ ವ್ಯಕ್ತಪಡಿಸಿದ್ದಾರೆ. ಅಂದಹಾಗೆ […]

ರಾಜ್ಯ

ರಾಜ್ಯದಲ್ಲಿ ಪ್ರಪ್ರಥಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ‘ವಿಸ್ಟಾಡೋಮ್ ‘ ಬೋಗಿಗಳ ರೈಲು

ರಾಜ್ಯದಲ್ಲಿ ಪ್ರಪ್ರಥಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ‘ವಿಸ್ಟಾಡೋಮ್ ‘ ಬೋಗಿಗಳ ರೈಲು ಮಂಗಳೂರು Prajakiran.com : ಮಂಗಳೂರು ಮತ್ತು ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್‌ ರೈಲು ಸಂಚಾರಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿ, ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಅವರು, ಈ ಯೋಜನೆಗೆ ಅನುವು ಮಾಡಿಕೊಟ್ಟ ನಮ್ಮ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮಾರ್ಗದಲ್ಲಿ ಸುಬ್ರಮಣ್ಯ ದೇವಸ್ಥಾನವಿದೆ. ಧಾರ್ಮಿಕ […]

ಅಂತಾರಾಷ್ಟ್ರೀಯ

ದೆಹಲಿ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ ಎಂದ ಧಾರವಾಡದ ಬಿಜೆಪಿ ಶಾಸಕ ಬೆಲ್ಲದ….!

ಧಾರವಾಡ prajakiran.com : ನನ್ನ ದೆಹಲಿ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ. ನಾನು ನಮ್ಮ ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂದಿದ್ದೇನೆ ಎಂದು ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟ ಪಡಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಹೇಳಿದರು. ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ […]

ರಾಜ್ಯ

ಮರಾಠ ಸಮಾಜಕ್ಕೆ ಪ್ರಾಧಿಕಾರ ಬೇಡ, ೨ಎ ಮೀಸಲಾತಿ ಬೇಕು ಎಂದ ಶಾಸಕಿ

ಧಾರವಾಡ prajakiran.com : ಮರಾಠ ಸಮಾಜಕ್ಕೆ ರಾಜ್ಯ ಸರಕಾರ ನೀಡಿರುವಅಭಿವೃದ್ದಿ ಪ್ರಾಧಿಕಾರ ಬೇಡ, ನಮಗೆ ೨ಎ ಮೀಸಲಾತಿ ಬೇಕು. ಮುಂದಿನ ದಿನಗಳಲ್ಲಿ ಮೀಸಲಾತಿ ನೀಡದಿದ್ದರೆ ಗ್ರಾಪಂ, ಜಿಪಂ, ತಾಪಂ, ವಿಧಾನಸಭೆ, ಎಂಪಿ‌ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳಕರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾವು ಯಡಿಯೂರಪ್ಪ ಬಳಿ ಭಿಕ್ಷೆ ಕೇಳುತ್ತಿಲ್ಲ. ನಾವೇನು ಭಿಕಾರಿಗಳೂ ಅಲ್ಲ, ನಮಗೆ ಐವತ್ತು ಕೋಟಿಯಲ್ಲ. ಐನೂರು ಕೋಟಿ ಕೊಟ್ಟರೂ ಬೇಕಾಗಿಲ್ಲ. ನಿಮ್ಮ‌ ಲಿಂಗಾಯತ ಸಮಾಜಕ್ಕೆ ಐನೂರು ಕೋಟಿ […]

ರಾಜ್ಯ

ವಿನಯ ಕುಲಕರ್ಣಿ ಕ್ಲೀನ್ ಚಿಟ್ ತೆಗೆದುಕೊಂಡು ಹೊರಗೆ ಬರುತ್ತಾರೆ ಎಂದ ಲಕ್ಷ್ಮಿ ಹೆಬ್ಬಾಳಕರ್

ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ಥೈರ್ಯ ತುಂಬಿದರು. ಬಳಿಕ ಹೇಳಿಕೆ ನೀಡಿದಅವರು,  ಇದು ಏಕೆ ನಡೆದಿದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ ಇದೆಲ್ಲಾ ರಾಜಕೀಯವಾಗಿ ನಡೆಯುತ್ತಿದೆ ಎಂದರು. ಕಾನೂನು ಪ್ರಕಾರ ಬಂಧನವಾದರೆ ಆಗಲಿ. ಆದರೆ ಅದರಲ್ಲಿ ರಾಜಕೀಯ ಇರಬಾರದು. ವಿನಯ ಅವರು ಶೀಘ್ರದಲ್ಲಿಯೇ ಕ್ಲೀನ್ ಚಿಟ್  ತೆಗೆದುಕೊಂಡು ಹೊರಗೆ ಬರುತ್ತಾರೆ. ನಮಗೆ ಸಂಪೂರ್ಣ ಭರವಸೆ ಇದೆ. ಎಲ್ಲ ನಾಯಕರು, ಕಾರ್ಯಕರ್ತರು […]

ಜಿಲ್ಲೆ

ಸವದತ್ತಿ ಪುರಸಭೆ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ರಾಜಶೇಖರ ಕಾರದಗಿ, ಉಪಾಧ್ಯಕ್ಷರಾಗಿ ದೀಪಕ್ ಜಾನ್ವೇಕರ್ ಅವಿರೋಧ  ಆಯ್ಕೆ

ಸವದತ್ತಿ prajakiran.com : ಸ್ಥಳೀಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಾಜಶೇಖರ ಕಾರದಗಿ ಉಪಾಧ್ಯಕ್ಷರಾಗಿ ದೀಪಕ್ ಜಾನ್ವೇಕರ್ ಅವಿರೋಧವಾಗಿ ಆಯ್ಕೆಯಾದರು.  ಕಳೆದ ಎರಡು ವರ್ಷಗಳಿಂದ ಖಾಲಿ ಇದ್ದ ಸವದತ್ತಿ‌ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಇಂದು ಭರ್ತಿಯಾಗಿ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಅಧ್ಯಕ್ಷರಾಗಿ ರಾಜಶೇಖರ ಕಾರದಗಿ ಹಾಗೂ  ಉಪಾಧ್ಯಕ್ಷರಾಗಿ ದೀಪಕ ಜಾನ್ವೇಕರ್ ಅಧಿಕಾರ ಸ್ವೀಕರಿಸಿದರು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ  ರಾಜಶೇಖರ ಕಾರದಗಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ದೀಪಕ ಜಾನ್ವೇಕರ್ […]

ರಾಜ್ಯ

ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಧಾರವಾಡ prajakiran.com : ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಕ್ರಮಬದ್ದ ನಾಮಪತ್ರಗಳ ವಿವರ ಹೀಗಿದೆ :  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ ( ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ […]

ರಾಜ್ಯ

ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದ ವಿನಯ ಕುಲಕರ್ಣಿ

ಧಾರವಾಡ prajakiran.com : ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಎದ್ದಿವೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಆರು ಕುದುರಿ ಮಾರಾಟ ಮಾಡಿದ್ದೇನೆ.  ಹೊಸ ಕುದುರೆ ನೋಡಲು ಹೋಗಿದ್ದೆ. ನಾನು ರಾಜಸ್ತಾನಕ್ಕೆ ಕುದುರೆ ತರಲು ಹೋಗಿದ್ದೆ. ಹೊರತು […]

ರಾಜ್ಯ

ಶಿರಾ, ಆರ್.ಆರ್.ನಗರ ಅಭ್ಯರ್ಥಿ ಹೆಸರು ಎರಡು ದಿನಗಳಲ್ಲಿ ಹೈಕಮಾಂಡನಿಂದ ಪ್ರಕಟ

ಧಾರವಾಡ prajakiran.com : ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಎರಡು ದಿನಗಳಲ್ಲಿ ಹೈಕಮಾಂಡ್ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಹೇಳಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಕೋರ್ ಕಮೀಟಿಯಲ್ಲಿ ಚರ್ಚಿಸಿ ಈಗಾಗಲೇ ಕೇಂದ್ರಕ್ಕೆ ಅಭ್ಯರ್ಥಿಗಳ ಹೆಸರು ಕಳುಹಿಸಿದ್ದೇವೆ. ಆದ್ದರಿಂದ ಇನ್ನೆರಡು ದಿನಗಳಲ್ಲಿ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು. ವಿಧಾಪರಿಷತ್ ಚುನಾವಣೆಗೆ ನಾವು ಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತದಾರರು […]

ರಾಜ್ಯ

ಬಿಜೆಪಿಯಿಂದ ಜ್ಞಾನವರ್ಧನೆಗೆ ‘ಪುಸ್ತಕ ಓದು’ ಅಭಿಯಾನ ; ಜಾಲತಾಣದಲ್ಲಿ ಫೋಟೋ ವೈರಲ್

ಮಂಜುನಾಥ ಎಸ್.ರಾಠೋಡ ಗದಗ prajakiran.com : ಫೇಸ್ಬುಕ್‌ನಲ್ಲಿ ಕಳೆದೈದು ದಿನಗಳಿಂದ ಪುಸ್ತಕ ಓದುವ ಚಾಲೆಂಜ್‌ ಟ್ರೆಂಡ್‌ ಶುರುವಾಗಿದೆ.  ಫೇಸ್‌ಬುಕ್‌ನಲ್ಲಿ ಕೆಲ ದಿನಗಳಿಂದ ‘ ಕಪಲ್ ಚಾಲೆಂಜ್‘, ‘ಕೆಸರಿ ಚಾಲೆಂಜ್‘, ‘ಸಿಂಗಲ್ ಚಾಲೆಂಜ್‘ ಜನಪ್ರಿಯವಾಗಿದ್ದು ಗೊತ್ತಿರಬಹುದು. ಹೀಗೆ ಒಂದಲ್ಲ ಒಂದು ಅಭಿಯಾನ ಸಕ್ರಿಯವಾಗಿರುವ ಈ ದಿನಗಳಲ್ಲಿ  ಪುಸ್ತಕ ಓದುವ ಹವ್ಯಾಸಕ್ಕೆ ಪುಷ್ಟೀಕರಣ ಮತ್ತು ವಿದ್ಯಾರ್ಥಿಗಳಲ್ಲಿ  ತಿಳಿವಳಿಕೆ ಮೂಡಿಸುವ ಸಲುವಾಗಿ ಬಿಜೆಪಿ ಪಕ್ಷ “ಪುಸ್ತಕ ಓದುವ ಚಾಲೆಂಜ್” ಎನ್ನುವ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ. ಜಗತ್ತಿನಲ್ಲಿ ಪ್ರತಿಯೊಬ್ಬರು ಓದುವುದನ್ನು ರೂಡಿಸಿಕೊಳ್ಳಬೇಕು. ಅದಕ್ಕಾಗಿ […]