ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ ಅಭಿಮಾನಿಗಳ ರಕ್ತದಾನ

ಧಾರವಾಡ prajakiran.com : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ 52 ನೇ ವರ್ಷದ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಶನಿವಾರ ಅಭಿಮಾನಿಗಳು ರಕ್ತದಾನ ಮಾಡಿ ಅವರ ಅನುಪಸ್ಥಿತಿಯನ್ನು ನೆನೆದರು. ನಗರದ ಗಾಂಧಿ ಚೌಕನಲ್ಲಿರುವ ಲಯನ್ಸ್ ಜಿಮ್​​ನಲ್ಲಿ‌ ಸರ್ಕಾರಿ ಆಸ್ಪತ್ರೆಯ ರಕ್ತದಾನ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ  ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ರಕ್ತದಾನಕ್ಕೆ ಸಾಕ್ಷಿಯಾದರು. ಇದೇ ವೇಳೆ ಅಭಿಮಾನಿಯೊಬ್ಬರು ವಿನಯ್​ ಕುಲಕರ್ಣಿ  ಅವರ ಭಾವಚಿತ್ರ ಹೊಂದಿರುವ ಮುಖವಾಡ ಧರಿಸಿ ವಿನಯ್​ ಕುಲಕರ್ಣಿ ಅವರನ್ನು ಬಂಧಿಸಿರಬಹುದು. ಆದರೆ ಅವರ […]