ಅಪರಾಧ

ಧಾರವಾಡದಲ್ಲಿ ಮೂರು ಸುತ್ತು ಗುಂಡಿನ ದಾಳಿಗೆ ಒಬ್ಬ ಸಾವು, ಇನ್ನಿಬ್ಬರು ಗಂಭೀರ

ಧಾರವಾಡ prajakiran.com : ರಾತ್ರೋ ರಾತ್ರಿ ಮೂರು ಸುತ್ತು ಗುಂಡಿನ ದಾಳಿ ನಡೆದು, ಗುಂಡಿನ ದಾಳಿಗೆ ಒಬ್ಬ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಇದರಿಂದಾಗಿ ಮದಿಹಾಳ ಹಾಗೂ ಸುತ್ತಮುತ್ತಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇಬ್ಬರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಫಲಿಸದೆ ಒಬ್ಬ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ್ದವನನ್ನು ಶಿವಯೋಗಿ ಬಾವಿಕಟ್ಟಿ ಎಂದು ಗುರುತಿಸಲಾಗಿದೆ. ಇತ ನವಲಗುಂದ ತಾಲೂಕಿನ ಶಿರೂರ ಗ್ರಾಮದವನಾಗಿದ್ದು, ಈತ ಕಳೆದ […]