ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]

ರಾಜ್ಯ

ಧಾರವಾಡ : ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಶುಕ್ರವಾರ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದರು. ಅದರಲ್ಲೂ ವಿಶೇಷವಾಗಿ ಈ ಹಿಂದೆ ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿದ್ದ ಮೋತಿಲಾಲ್ ಪವಾರ್ ಅವರನ್ನು ಹಲವು ಗಂಟೆಗಳ ಕಾಲ ಸಿಬಿಐ ತೀವ್ರ ವಿಚಾರಣೆ ನಡೆಸಿದರು. ಇವರು ಯೋಗೀಶ್ ಗೌಡರ ಕೊಲೆ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಚಾರ್ಜ್ […]

ರಾಜ್ಯ

ಡಿವೈಎಸ್ಪಿ ಚಂದ್ರಶೇಖರ ವಿಚಾರಣೆ ನಡೆಸಿದ ಸಿಬಿಐ : ಪೊಲೀಸ್ ಅಧಿಕಾರಿಗಳಿಗೆ ಮುಂದುವರೆದ ಡ್ರಿಲಿಂಗ್

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡದ  ಕೆಲವು ಪೊಲೀಸರಿಗೆ ಬಿಸಿ ತಾಕಿಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಕಳೆದ ಹಲವು ದಿನಗಳಿಂದ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳ ತಂಡ ಬೆಳಗ್ಗೆಯಿಂದ ಸಂಜೆಯವರೆಗೆ ಹಲವರನ್ನು ಕರೆಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಈ ಪ್ರಕರಣದಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ರಾಜೀ ಸಂಧಾನಕ್ಕೆ ಯತ್ನಿಸಿದ್ದ ಆರೋಪಕೇಳಿ ಬಂದಿದ್ದ ಧಾರವಾಡದ ಡಿವೈಎಸ್ಪಿ ಹಾಗೂ ಪ್ರಸ್ತುತ ಬೀದರ ಜಿಲ್ಲೆಯ […]

ರಾಜ್ಯ

ಡಿವೈಎಸ್ಪಿ ತುಳಜಪ್ಪ ಸುಲ್ಫಿ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೇ ಸಿಬಿಐ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ತನಿಖೆ ಮುಂದುವರೆದಿದ್ದು, ಈ ಹಿಂದೆ ಬೆಳಗಾವಿಯ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿಯನ್ನು ಹಲವು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ತುಳಜಪ್ಪ ಸುಲ್ಪಿ ಸದ್ಯ ವಿಜಯಪುರ ಡಿವೈಎಸ್ಪಿಯಾಗಿದ್ದು, ಅವರು ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಮೇಲೆ ರಾಜೀಸಂಧಾನಕ್ಕೆ ಒತ್ತಡ […]

ರಾಜ್ಯ

ಹಿರಿಯ ಪೊಲೀಸ್ ಅಧಿಕಾರಿ ಜಿನೇಂದ್ರ ಖಣಗಾವಿ ವಿಚಾರಣೆ ನಡೆಸಿದ ಸಿಬಿಐ

ಬೆಂಗಳೂರು prajakiran.com :  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರವೂ ಹಿರಿಯ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಿದರು. ಅಂದು ಹುಬ್ಬಳ್ಳಿ ಧಾರವಾಡ ಡಿಸಿಪಿಯಾಗಿದ್ದ ಹಾಗೂ ಸದ್ಯ ರಾಮನಗರ ಪೊಲೀಸ್ ತರಬೇತಿ ಶಾಲೆ ಮುಖ್ಯಸ್ಥರಾಗಿರುವ ಜಿನೇಂದ್ರ ಖಣಗಾವಿಅವರನ್ನು ವಿಚಾರಣೆ ನಡೆಸಿದರು. ಅವರು ಯೋಗೀಶಗೌಡ ಗೌಡರ ಕೊಲೆಯಾದ ದಿನದಂದು 2016ರ ಜೂನ್ 15ರಂದು   ಹುಬ್ಬಳ್ಳಿ ಧಾರವಾಡ ಡಿಸಿಪಿಯಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಬೆಳಗ್ಗೆಯಿಂದ ತೀವ್ರ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. […]

ರಾಜ್ಯ

ನಿವೃತ್ತ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ವಿಚಾರಣೆ ನಡೆಸಿದ ಸಿಬಿಐ

 ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆಯವರನ್ನು ಸಿಬಿಐ ಅಧಿಕಾರಿಗಳು ಸೋಮವಾರ ವಿಚಾರಣೆ ನಡೆಸಿದರು. ಅಲ್ಲದೆ, ಈ ಹಿಂದೆ ಕನ್ನಡ ಪರ ಸಂಘಟನೆ ಜೊತೆಗೆ ಗುರುತಿಸಿಕೊಂಡಿದ್ದ ಸದ್ಯ ಮಾಜಿ ಸಚಿವರ ಆಪ್ತನಾಗಿರುವ ಕಾಂಗ್ರೆಸ್ ಮುಖಂಡ ಆನಂದ ಕಲಾಲ್ ನನ್ನು ಕೂಡ ಸಿಬಿಐ ಅಧಿಕಾರಿಗಳು ಡ್ರಿಲಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ […]