ರಾಜ್ಯ

ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕ ಸಾಧನೆ

ಬೆಂಗಳೂರು prajakiran.com : ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕನೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ  ಮಹೇಶ ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಶ್ ಎನಿಸಿಕೊಂಡಿದ್ದಾನೆ.  ಅವರ ತಾಯಿ ಮಲ್ಲವ್ವ  ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ […]