ಜಿಲ್ಲೆ

ಧಾರವಾಡದ ಕಾಂಗ್ರೆಸ್ ಮುಖಂಡ ಬಸವರಾಜ್ ಬಿಕ್ಕಣ್ಣವರ ಇನ್ನಿಲ್ಲ

ಧಾರವಾಡ prajakiran.com : ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕವಿವಿ ಮಾಜಿ ಸಿಂಡಿಕೇಟ್ ಸದಸ್ಯರು, ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಜಿಲಾಧ್ಯಕ್ಷರಾಗಿದ್ದ ಬಸವರಾಜ ಬಿಕ್ಕಣ್ಣವರ ಶನಿವಾರ ಸಂಜೆ ನಿಧನ ಹೊಂದಿದರು. ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಅವರು ಪತ್ನಿ,ಮಗ ಹಾಗೂ ಅಪಾರ ಬಳಗ ಅಗಲಿದ್ದಾರೆ.ಇವರ ಅಂತ್ಯಕ್ರಿಯೆ ಸೆ. 13ರಂದು ಭಾನುವಾರ 9 ಗಂಟೆಗೆ ಕಿತ್ತೂರಿನ ತೋಟದ […]

pu college
ರಾಜ್ಯ

ಖಾಸಗಿ ಶಾಲೆಗಳ ಶಿಕ್ಷಕರ ನೆರವಿಗೆ ಧಾವಿಸದ ಸರಕಾರ

ಧಾರವಾಡ prajakiran.com : ರಾಜ್ಯ ಸರಕಾರ ಖಾಸಗಿ ಶಾಲೆಗಳ ಸಾವಿರಾರು ಶಿಕ್ಷಕರ ನೆರವಿಗೆ ಧಾವಿಸದಿರುವುದು ಖೇದಕರ ಸಂಗತಿ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಹೇಳಿದ್ದಾರೆ. ರಾಜ್ಯದಲ್ಲಿ ೨೦ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ಕಾಲೇಜುಗಳಿವೆ. ಇದರಲ್ಲಿ ೫೦ ಸಾವಿರಕ್ಕೂ ಹೆಚ್ಚು ಶಿಕ್ಷಕ- ಉಪನ್ಯಾಸಕರಿದ್ದಾರೆ. ಇವರು ಕಳೆದ ೫-೬ ತಿಂಗಳಿನಿಂದ ಸಂಬಳವಿಲ್ಲದೇ ಸಂಕಷ್ಟದಲ್ಲಿದ್ದಾರೆ. ಕೆಲವು ಶಿಕ್ಷಕರು ಸಂಬಳ ಇಲ್ಲದ ಪರಿಣಾಮ ಜೀವನ ನಿರ್ವಹಣೆಗೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಸ್ಥಾಪಿಸಿದರೆ ಬಿಜೆಪಿ ಪಕ್ಷದ ಕೆಲವರು […]

ರಾಜ್ಯ

ಧಾರವಾಡದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದ ಕಾಂಗ್ರೆಸ್…!

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಶುಕ್ರವಾರ ಧಾರವಾಡದಲ್ಲಿ ಕೆಲ ಹೊತ್ತು ರಸ್ತೆ ತಡೆ  ನಡೆಸಿ, ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿನಗರ ಸರ್ಕಲ್‌ದಿಂದ ಎತ್ತಿನಗಾಡಿ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಯಿತು. ಅತಿವೃಷ್ಟಿಯಿಂದ ರೈತರ ಬೆಳೆ ಹಾನಿ ಆಗಿದೆ. ಇದರಿಂದ  ಬ್ಯಾಂಕ್‌ಗಳಿಂದ ಸಾಲ ಪಡೆದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. […]

ರಾಜ್ಯ

ಪಾಕಿಸ್ತಾನ, ನಮ್ಮ ಜೀನ್ಸ್ ಒಂದೇ ಎಂದ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ….!

ಧಾರವಾಡ prajakiran.com : ಕರೋನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿವೆ ಎಂದು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಈ ಯಡವಟ್ಟು ಮಾಡಿಕೊಂಡಿದ್ದಾರೆ.  ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಪ್ರತಿನಿತ್ಯ 70 ಸಾವಿರ ಕರೋನಾ ಕೇಸ್ […]

ರಾಜ್ಯ

ಶಾಸಕರ ನೆರವಿಗೆ ಬಾರದ ಕೈ ನಾಯಕರು ….!

ಬೆಂಗಳೂರು prajakiran.com : ಪುಲಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರನ್ನು ರಾಜಕೀಯವಾಗಿ ಹಣಿಯಲು ಆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಬಿಎಂಪಿ ನಾಲ್ವರು ಕಾಂಗ್ರೆಸ್ ಸದಸ್ಯರು ಮೌನವಹಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನೆ ನಂತರಅವರ ನೆರವಿಗೆ ಧಾವಿಸದೆ ಮೌನವಹಿಸಿರುವುದು ಕೈ ಒಳಗಿನ ರಾಜಕಾರಣ ಬಯಲಿಗೆ ಬಂದಿದೆ. ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದರಿಂದ ಮೂಲ ವಲಸೆ ತಿಕ್ಕಾಟ ನಡೆದಿತ್ತು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರಿಗೆ ಕೂಡ ದೂರು ನೀಡಿದ್ದರು. ಕಾಂಗ್ರೆಸ್ ನಲ್ಲಿ ಒಂದು ವರ್ಗಅವರನ್ನು ಮೂಲೆಗುಂಪು […]

ರಾಜ್ಯ

ಮುಧೋಳದ ರನ್ನ ಸಕ್ಕರೆ ಕಾರ್ಖಾನೆ ಖಾಸಗಿಕರಣಕ್ಕೆ ವಿರೋಧ

ಧಾರವಾಡ prajakiran.com : ಮುಧೋಳದ ರನ್ನ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವ ರಾಜ್ಯದ ಬಿಜೆಪಿ ಸರಕಾರದ ಪ್ರಯತ್ನವನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಖಂಡಿಸಿದ್ದಾರೆ. ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಖಾಸಗೀಕರಣ ಕಾರ್ಯ ಆಘಾತಕಾರಿ ವಿಷಯವಾಗಿದೆ. ಹಲವಾರು ವರ್ಷಗಳಿಂದ ಸಾವಿರಾರು ರೈತರು ಶ್ರಮವಹಿಸಿದ ಫಲವಾಗಿರುವ ರನ್ನ ಸಕ್ಕರೆ ಕಾರ್ಖಾನೆಯನ್ನು, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಏಕಸ್ವಾಮ್ಯದ ಮಾಲೀಕರಿಗೆ ವಹಿಸಲು ಹೊರಟಿರುವ ನಡೆ ಸರಿಯಲ್ಲ. ಸಹಕಾರಿ ವಲಯದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮಾರಲು ತರಾತುರಿ ನಡೆಸಿರುವ ಸರಕಾರದ ನಿರ್ಣಯ ಖಂಡನೀಯ. […]

p h neeralkeri
ರಾಜ್ಯ

ರಾಮಮಂದಿರ ಭೂಮಿಪೂಜೆಗೆ ಉತ್ತರ ಕರ್ನಾಟಕ ನಿರ್ಲಕ್ಷ್ಯ

ಧಾರವಾಡ prajakiran.com : ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದವರನ್ನು ಅಲಕ್ಷಿಸಿರುವುದು ಸರಿಯಲ್ಲ ಎಂದು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಅಭಿಪ್ರಾಯಪಟ್ಟಿದ್ದಾರೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ನಮ್ಮ ಉತ್ತರ ಕರ್ನಾಟಕದಿಂದ ಯಾರೊಬ್ಬರನ್ನೂ ಆಹ್ವಾನಿಸದಿರುವುದು ವಿಷಾದದ ಸಂಗತಿ, ಶ್ರೀ ರಾಮಜನ್ಮಭೂಮಿ ಹೊರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ನೂರಾರು ಪ್ರಮುಖರು ಧಾರವಾಡ, ಬೆಳಗಾವಿ, […]