ನವದೆಹಲಿ prajakiran.com : ರಾಜ್ಯದಲ್ಲಿ ಕರೋನಾ ಮರಣ ಮೃದಂಗ ಮುಂದುವರೆದಿದ್ದು, ಕಳೆದ 24 ಗಂಟೆಗಳಅವಧಿಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ರಾಯಚೂರಿನ 69 ವರ್ಷದ ಮಹಿಳೆ ಕರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಅದೇ ರೀತಿ ಬೀದರನ 49 ವರ್ಷದ ಪುರುಷ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗುಮ್ಮಟನಗರಿ ವಿಜಯಪುರದಲ್ಲಿ ಸಾವು ಸಂಭವಿಸಿದ್ದು, ಅಲ್ಲಿ 82 ವರ್ಷದ ವೃದ್ದ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾನೆ. ದೇಶದಲ್ಲಿ ಕೂಡ ಕರೋನಾದಿಂದ ಬಳಲಿ ಬೆಂಡಾಗಿ […]