ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 77 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 959 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಶನಿವಾರ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದರೆ, ಈವರೆಗೆ 32 ಜನ ಸಾವನ್ನಪ್ಪಿದ್ದಾರೆ. 18 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 12 ಜನ ಗುಣಮುಖರಾಗಿ […]
Tag: # covid 19
ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ 70 ಸಾವು, 2798 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 70 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2798 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 36216 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ880 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 14716 ಜನ ಗುಣಮುಖರಾಗಿದ್ದು, 20883 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 504 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]
ಧಾರವಾಡದ ಕೋವಿಡ್ ಆಸ್ಪತ್ರೆಗಳ ಎಲ್ಲ ಒಳರೋಗಿಗಳಿಗೆ ಆ್ಯಂಟಿಜನ್ ಪರೀಕ್ಷೆ
ಧಾರವಾಡ prajakiran.com : ಸರ್ಕಾರದಿಂದ ಜಿಲ್ಲೆಗೆ ೩,೩೦೦ ಆ್ಯಂಟಿಜನ್ ಪರೀಕ್ಷಾ ಕಿಟ್ಗಳು ಬರುತ್ತಿವೆ. ಕಿಮ್ಸ್, ಎಸ್ಡಿಎಂ, ಜಿಲ್ಲಾಸ್ಪತ್ರೆ ಸೇರಿದಂತೆ ಅಗತ್ಯವಿರುವ ಇತರೆ ಆಸ್ಪತ್ರೆಗಳಲ್ಲಿ ದಾಖಲಾಗುವ ಇತರೆ ಸಾಮಾನ್ಯ ಒಳ ರೋಗಿಗಳನ್ನು ಆ್ಯಂಟಿಜನ್ ಪರೀಕ್ಷೆಗೆ ಒಳಪಡಿಸಲು ಅನುಕೂಲವಾಗಲಿದೆ. ಈ ಪರೀಕ್ಷೆಯಿಂದ ಕೋವಿಡ್ನ ತಪಾಸಣಾ ವರದಿ ತ್ವರಿತವಾಗಿ ಕೆಲವೇ ಗಂಟೆಗಳಲ್ಲಿ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀವ್ರ ನೆಗಡಿ, […]
ರಾಜ್ಯದಲ್ಲಿ ಗುರುವಾರ ಕರೋನಾಕ್ಕೆ 17 ಸಾವು, 2228 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 17 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2,228 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 957 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು12,833 ಜನ ಗುಣಮುಖರಾಗಿದ್ದು, 17,782 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 457 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರ […]
ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ ಬರೋಬ್ಬರಿ 7 ಸಾವು, 75 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ 75 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 832ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಜನ ಸಾವನ್ನಪ್ಪಿದ್ದರೆ ಗುರುವಾರವೂ ಬರೋಬ್ಬರಿ 7 ಜನ ಸಾವನ್ನಪ್ಪಿದ್ದಾರೆ. 19 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜು. […]
ಶೇ.೫೦ ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ
ಧಾರವಾಡ prajakiran.com : ಕೋವಿಡ್-೧೯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್ ಜೊತೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ. ಜಿಲ್ಲಾಡಳಿತ ಅಂತಹ ಆಸ್ಪತ್ರೆಗಳಿಗೆ ಅಗತ್ಯ ಸಹಕಾರ ನೀಡಲಿದೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ […]
ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ, ಪತ್ನಿ, ಪುತ್ರನಿಗೂ ಸೋಂಕು…!
ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದಲ್ಲಿ ಈವರೆಗೆ ಐವರು ಶಾಸಕರು ಹಾಗೂ ಒಬ್ಬ ಸಂಸದರಿಗೆ ವಕ್ಕರಿಸಿರುವ ಕರೋನಾ ಇದೀಗ ಆರನೇ ಶಾಸಕರಿಗೆ ಕರೋನಾ ಹರಡಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರಅವರಿಗೆ ಕರೋನಾ ವ್ಯಾಪಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಅವರ ಆಪ್ತ ಕಾರ್ಯದರ್ಶಿಗೂ ಕರೋನಾ ಹಬ್ಬಿತ್ತು. ಅವರಿಗೆ ಕರೋನಾ ಬಂದ ಬೆನ್ನಲ್ಲೇ ಶಾಸಕರು ತಮ್ಮ ಗಂಟಲು ದ್ರವ ಮಾದರಿಯನ್ನು […]
ಹುಬ್ಬಳ್ಳಿ ಕಿಮ್ಸ್ ನ ಮತ್ತೋಬ್ಬ ಡಾಕ್ಸರಗೂ ಕರೋನಾ ಕಂಟಕ …!
ಹುಬ್ಬಳ್ಳಿ prajakiran.com : ಉತ್ತರ ಕರ್ನಾಟಕ ಭಾಗದ ಹಾಗೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಏಕೈಕ ಆಶಾಕಿರಣವಾಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೋನಾ ಕಾಟ ನೀಡುತ್ತಿದೆ. ಜಿಲ್ಲೆಯ 260ಕ್ಕೂ ಹೆಚ್ಚು ಕರೋನಾ ಸೋಂಕಿತರನ್ನು ಗುಣಮುಖರನ್ನಾಗಿ ಮನೆಗೆ ಕಳುಹಿಸಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯರಿಗೂ ಕರೋನಾ ಕಾಡುತ್ತಿದೆ. ಮಂಗಳವಾರವಷ್ಟೇ ಕಿಮ್ಸ್ ಕ್ಯಾಂಪಸ್ ನ ಮೂವರು ಸಿಬ್ಬಂದಿ ಹಾಗೂ ಕೋವಿಡ್ ಸೆಂಟರ್ ನಲ್ಲಿ ಮೂವರು ನರ್ಸ್ ಗಳು ಸಹ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ಹಲವು ದಿನಗಳ ಹಿಂದೆಯಷ್ಟೇ ಧಾರವಾಡದ ಕೆಂಪಗೇರಿಯಲ್ಲಿ ವಾಸಿಸುವ […]
ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮಾಜಿ ಸದಸ್ಯನಿಗೂ ಕರೊನಾ….!
ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು. ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ […]
ಧಾರವಾಡ 20, ಹುಬ್ಬಳ್ಳಿ 59 ಸೇರಿ 89 ಕೋವಿಡ್ ಪಾಸಿಟಿವ್
ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ 89 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ಏರಿದೆ. ಇದುವರೆಗೆ 279 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 458 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 20 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ- 28409 ( 45 ವರ್ಷ,ಪುರುಷ ) ಹುಬ್ಬಳ್ಳಿ ವಡ್ಡರ ಓಣಿ ನಿವಾಸಿ. ಪಿ-24820 ಅವರೊಂದಿಗೆ ಸಂಪರ್ಕ ಹೊಂದಿದ್ದರು. ಪಿ-28410 ( 78 ವರ್ಷ,ಪುರುಷ) ಹುಬ್ಬಳ್ಳಿ […]