ರಾಜ್ಯ

ಧಾರವಾಡ ಎಸ್ಪಿ ಪಿ ಕೃಷ್ಣಕಾಂತಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಹೆಚ್ಚುವರಿ ಹೊಣೆ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ ವಿರುದ್ದ ಪತ್ರ ಸಮರದ ಮೂಲಕ ಪೊಲೀಸ್ ಇಲಾಖೆಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ. ಕೃಷ್ಣಕಾಂತ ಅವರನ್ನು ರಾಜ್ಯ ಸರಕಾರ ಧಾರವಾಡ ಎಸ್ಪಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅಲ್ಲದೆ, ಪೊಲೀಸ್ ಆಯುಕ್ತ ಆರ್. ದಿಲೀಪ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧ ವಿಭಾಗದ ಡಿಐಜಿಯಾಗಿ ನೇಮಿಸಿದ್ದ ಬೆನ್ನಲ್ಲೇ ಧಾರವಾಡ ಎಸ್ಪಿ ಪಿ ಕೃಷ್ಣಕಾಂತ ಅವರಿಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿಯೂ ಮುಂದುವರೆಯಲು ಹೆಚ್ಚುವರಿ ಹೊಣೆ ನೀಡಿ ಸರಕಾರ ಆದೇಶ ಹೊರಡಿಸಿದೆ. […]