ರಾಜ್ಯ

ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ….!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು ಪೋಸ್ಟ್ ಧಾರವಾಡ prajakiran.com : ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತ ಚೌಕಿದಾರ ಮಂಜು ಎಂಬುವರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ವಾಟ್ಸ್ ಅಪ್ ಗಳಲ್ಲಿ ಸಹ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಬಹುಚರ್ಚೆಗೆ ಗ್ರಾಸವಾಗಿದ್ದು, ಅನೇಕರು ಅದಕ್ಕೆ 100% ಸತ್ಯವಾದ ಮಾತು, ಮಂಜು ನಿಮಗೆ ಈಗ ಗೊತ್ತಾಯಿತಾ ಎಂದು ಸಹಮತ ವ್ಯಕ್ತಪಡಿಸಿದ್ದಾರೆ. ಅಂದಹಾಗೆ […]

ರಾಜ್ಯ

ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶಾಸಕರು ಆತ್ಮೀಯರೇ,  Covid ಪರೀಕ್ಷೆ ಸಮಯದಲ್ಲಿ ನನಗೆ ಸೋಂಕು ದೃಢಪಟ್ಟಿದ್ದು,  ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇದ್ದರು ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ಸಾರ್ವಜನಿಕರು, ಮುಖಂಡರು ಹಾಗೂ  ಕಾರ್ಯಕರ್ತ ಬಂಧುಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ. ಆದರೆ ಈ ವೇಳೆ ತಮಗೆ ದೂರವಾಣಿ ಸಂಪರ್ಕ […]

ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಮೇಲ್ಸೆತುವೆ ಪ್ಯಾನೆಲ್‌ ಕುಸಿತ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆಯ ಪ್ಯಾನೆಲ್‌ಗಳು ಕಳಚಿದ ಹಿನ್ನೆಲೆಯಲ್ಲಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಭೇಟಿ ಮಾಡಿ ದೂರು ನೀಡಿದರು. ಧಾರವಾಡದ ನವಲೂರ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ತಡೆಗೋಡೆ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿರುವುದು ಕಂಡು ಬಂದಿತ್ತು. ಈ ಕುರಿತು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಅವರನ್ನು ಭೇಟಿ ಮಾಡಿ, ಸಮಗ್ರ ಮಾಹಿತಿಯಿರುವ ಪತ್ರವನ್ನು ನೀಡಿ ಈ ಕುರಿತು […]

ರಾಜ್ಯ

ಧಾರವಾಡ ಬಿಜೆಪಿ ಶಾಸಕರ ನಿವಾಸದ ಎದುರು ಬಿತ್ತನೆ ಬೀಜಕ್ಕಾಗಿ ರೈತರ ಪ್ರತಿಭಟನೆ

ಧಾರವಾಡ prajakiran.com : ಧಾರವಾಡ  ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ರೈತರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜ ಖರೀದಿಗೆ ಮುಗಿ ಬಿದ್ದಿದ್ದಾರೆ. ಆದರೆ ಅವರಿಗೆ ಸಮಯಕ್ಕೆ ಸರಿಯಾಗಿ ಬೀಜ ಸಿಗದಿರುವುದು ತಲೆನೋವಾಗಿ ಪರಿಣಮಿಸಿದೆ.  ಬಿತ್ತನೆ ಬೀಜ ಹಾಗೂ ರಸ ಗೊಬ್ಬರದ ಸಮಸ್ಯೆ ಎದುರಾಗದಂತೆ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಹೇಳಿತ್ತಿದ್ದರೂ, ರೈತರು ಮಾತ್ರ ಪರದಾಡುತ್ತಲೇ ಇದ್ದಾರೆ. ಬಿತ್ತನೆ ಬೀಜ ಖರೀದಿಗಾಗಿ ರೈತರು ದಿನಗಟ್ಟಲೇ ರೈತ ಸಂಪರ್ಕ ಕೇಂದ್ರದ ಎದುರು ಕಾಯುವುದು ಮಾತ್ರ ತಪ್ಪುತ್ತಿಲ್ಲ. ಇಲ್ಲಿನ ಹೊಸ್ […]

ರಾಜ್ಯ

ಧಾರವಾಡ ಜಿಲ್ಲೆಯ ಕಾರ್ಮಿಕರ ಕಿಟ್ ಬಿಜೆಪಿ ಕಾರ್ಯಕರ್ತರ ಪಾಲು …!

ಧಾರವಾಡ prajakiran.com : ರಾಜ್ಯದ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಇತರೆ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ವಿತರಿಸಲು ಸರಬರಾಜು ಮಾಡಿದ ದವಸ ಧಾನ್ಯಗಳ ಕಿಟ್ ಬಿಜೆಪಿ ಕಾರ್ಯಕರ್ತರ ಪಾಲಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಧಾರವಾಡದ ವಿವಿಧ ಬಡಾವಣೆಗಳಲ್ಲಿ ವಾಸಿಸುವ ಕಟ್ಟಡ ಕಾರ್ಮಿಕರಿಗೆ ವಿತರಿಸಬೇಕಾದ ಕಿಟ್ ಗಳನ್ನು ಅಕ್ರಮವಾಗಿ ಅವರಿವರ ಮನೆಯಲ್ಲಿ ದಾಸ್ತಾನು ಮಾಡಲಾಗಿದೆ. ಈ ಪೋಟೋಗಳು ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಾರ್ಮಿಕ ಇಲಾಖೆ ನೀಡಿದ […]