ರಾಜ್ಯ

ಬೆಣ್ಣೆಹಳ್ಳ, ತುಪ್ಪರಿಹಳ್ಳ ಪ್ರದೇಶಗಳಿಗೆ ಧಾರವಾಡ ಜಿಲ್ಲಾಧಿಕಾರಿ ಭೇಟಿ

ಧಾರವಾಡ : ಅತಿವೃಷ್ಟಿಯಿಂದ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಹರಿದು ನೆರೆಹಾವಳಿ ಎದುರಿಸುವ ನವಲಗುಂದ ತಾಲೂಕಿನ ವಿವಿಧ ಹಳ್ಳಿಗಳು ಮತ್ತು ನಾಲೆಗಳ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಇಂದು ಭೇಟಿ ನೀಡಿ ಅತಿವೃಷ್ಟಿ  ನಿರ್ವಹಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಯಮನೂರು ಗ್ರಾಮದ ಬಳಿ ಬೆಣ್ಣೆಹಳ್ಳದಿಂದ ಉಂಟಾಗುವ ಪರಿಸ್ಥಿತಿ, ಅಮರಗೋಳ ಗ್ರಾಮದ ಬಳಿಯ ನರಗುಂದ ಸೇತುವೆ, ಗೊಬ್ಬರಗುಂಪಿ,ಅಳಗವಾಡಿ,ಹೆಬ್ಬಾಳ,ಜಾವೂರ, ಹನಸಿ, ಶಿರಕೋಳ ಗ್ರಾಮಗಳ ಸುತ್ತಮುತ್ತಲಿನ ಕೃಷಿ ಭೂಮಿ ಮತ್ತು ಹಳ್ಳ,ಕೊಳ್ಳಗಳನ್ನು ಖುದ್ದಾಗಿ ವೀಕ್ಷಿಸಿದರು. ಹನಸಿ – ಶಿರಕೋಳ ಮಧ್ಯೆ ತುಪ್ಪರಿಹಳ್ಳದ […]