ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ 175 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಒಂದೇ ದಿನ 180 ಜನರು ಗುಣಮುಖರಾಗಿದ್ದು, ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಬುಧವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* ಧಾರವಾಡ ತಾಲೂಕು: ನಾರಾಯಣಪುರ 4ನೇ ಅಡ್ಡರಸ್ತೆ, ಹೊಸಯಲ್ಲಾಪೂರ, ಲಕ್ಕಮ್ಮನಹಳ್ಳಿ , ಗಾಂಧಿನಗರ, […]
Tag: # dharwad dist covid
ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!
ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ. ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]
ಧಾರವಾಡದ ಟೋಲ್ ನಾಕಾ, ಯಲ್ಲಾಪುರ, ಬೆಳಗಾವಿ ನಿವಾಸಿ ಸೇರಿ 6 ಸಾವು….!
ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ನಾಲ್ವರು ಹಾಗೂ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ತಲಾ ಒಬ್ಬರು ಸೇರಿ ಒಟ್ಟು ಆರು ಜನ ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮರಣವನ್ನಪ್ಪಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ನಿವಾಸಿ ಪಿ-94968 (50,ಪುರುಷ) ಹಾಗೂ ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದ ನಿವಾಸಿ ಪಿ- 83417 (78, ಮಹಿಳೆ) ಸಾವನ್ನಪ್ಪಿದ್ದಾರೆ. ಧಾರವಾಡ ಟೋಲ್ ನಾಕಾ […]
ಧಾರವಾಡ ಜಿಲ್ಲೆಯಲ್ಲಿ ಸೋಮವಾರ 8 ಸಾವು, 193 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 193 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3383 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಸೋಮವಾರವು 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 103 ಕ್ಕೆ ಏರಿದಂತಾಗಿದೆ. ಸೋಮವಾರ […]
ಧಾರವಾಡದ ತಡಸಿನಕೊಪ್ಪ ನಿವಾಸಿ ಸೇರಿ ಆರು ಜನರ ಸಾವು…!
ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಆರು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 3187 ಕ್ಕೆ ಏರಿದಂತಾಗಿದೆ. ಈ ಪೈಕಿ ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 1758 ಪ್ರಕರಣಗಳು ಸಕ್ರಿಯವಾಗಿವೆ. 37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇದುವರೆಗೆ 95 ಜನ ಮೃತಪಟ್ಟಂತಾಗಿದೆ. ಮೃತ ಸೋಂಕಿತರನ್ನು ಧಾರವಾಡ ತಡಸಿನಕೊಪ್ಪ ನಿವಾಸಿ ಪಿ-60158 (34,ಪುರುಷ), […]
ಧಾರವಾಡದ ಕೋವಿಡ್ ಕೇರ್ ಸೆಂಟರುಗಳಿಗೆ ಪುಸ್ತಕ, ಪತ್ರಿಕೆ, ಮನರಂಜನಾ ಚಟುವಟಿಕೆ
*ಪುಸ್ತಕ ದಾನ ನೀಡಲು ಸಾರ್ವಜನಿಕರಿಗೆ ಮನವಿ ಧಾರವಾಡ prajakiran.com : ಕೋವಿಡ್ ಕೇರ್ ಸೆಂಟರುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷಣ ರಹಿತ ಸೋಂಕಿತರ ಮನೋ ಸ್ಥೈರ್ಯ ಹೆಚ್ಚಿಸಲು ದೂರವಾಣಿ ಮೂಲಕ ಆಪ್ತ ಸಮಾಲೋಚನೆ,ಯೋಗ, ಮನರಂಜನಾ ಚಟುವಟಿಕೆಗಳನ್ನು ಕೈಗೊಳ್ಳುವುದು. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪುಸ್ತಕಗಳನ್ನು ಪೂರೈಸಲು ಕ್ರಮವಹಿಸಲಾಗುವುದು. ಸಾರ್ವಜನಿಕರು ಕೂಡ ಪುಸ್ತಕಗಳನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯ […]