ರಾಜ್ಯ

ಧಾರವಾಡದ ಖಾಸಗಿ ಆಸ್ಪತ್ರೆಗಳು ಹಾಸಿಗೆ ಒದಗಿಸದಿದ್ದರೆ ಕಠಿಣ ಕ್ರಮ

ಧಾರವಾಡ prajakiran.com : ಕೋವಿಡ್ ಸೋಂಕಿನ ತೀವ್ರ ಲಕ್ಷಣಗಳಿರುವ ವ್ಯಕ್ತಿಗಳಿಗೆ ಹಾಸಿಗೆ ಒದಗಿಸುವುದು ಪ್ರಥಮ ಪ್ರಾಶಸ್ತ್ಯದ ಕರ್ತವ್ಯವಾಗಿದೆ. ಖಾಸಗಿ ಆಸ್ಪತ್ರೆಗಳು ತಾವು ಘೋಷಿಸಿರುವ ಹಾಸಿಗೆಗಳ ಸಂಖ್ಯೆಯನ್ನು ತೀವ್ರ ಲಕ್ಷಣ ಇರುವ ರೋಗಿಗಳಿಗೆ ಒದಗಿಸಬೇಕು. ಲಕ್ಷಣ ರಹಿತ ಸೋಂಕಿತರು ಮತ್ತು ಸೌಮ್ಯ ಲಕ್ಷಣಗಳಿರುವವರು ಸಿಸಿಸಿ ಅಥವಾ ಹೋಂ ಐಸೋಲೇಷನ್‌ನಲ್ಲಿ, ಖಾಸಗಿ ಆಸ್ಪತ್ರೆಗಳು ನಿಗದಿತ ಸಂಖ್ಯೆಯ ಹಾಸಿಗೆಗಳನ್ನು ಒದಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ […]