ಧಾರವಾಡ prajakiran.com : ಆಸ್ತಿ ವಿವಾದ ವಿಚಾರ ಹಿನ್ನಲೆಯಲ್ಲಿ ಒಬ್ಬನ ಕೊಲೆನಡೆದಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ಈ ಘಟನೆ ನಡೆದಿದ್ದು, ಇದರಿಂದಾಗಿ ಅಮ್ಮಿನಬಾವಿ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶಿವಪ್ಪ ಕೊಡಬಳಗಿ (38) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಜಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬದ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ನಿನ್ನೇ ರಾತ್ರಿ ಈ ಗಲಾಟೆ ವಿಕೋಪಕ್ಕ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ ಎಂದು […]