ಅಪರಾಧ

ಧಾರವಾಡದಲ್ಲಿ ಹೆಂಡತಿ ಜಗಳವಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ….!

ಧಾರವಾಡ prajakiran.com : ಹೆಂಡತಿ ಜಗಳವಾಡಿದ್ದಕ್ಕೆ ಮನನೊಂದು ಗಂಡನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ದಲ್ಲಿ ಶುಕ್ರವಾರ ನಡೆದಿದೆ. ಮಹಾಂತೇಶ ಈರಪ್ಪ ಹುರಕಡ್ಲಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವ. ಈತ ಮೂಲತಃ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದವನಾಗಿದ್ದು, ಧಾರವಾಡದ ಹೆಂಡತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ತಕ್ಷಣ ಇದನ್ನು ಗಮನಿಸಿದ ಕುಟುಂಬದ ಸದಸ್ಯರು ಆತನನ್ನು ಆಸ್ಪತ್ರೆಗೆ ಸೇರಿಸಿದರು. ಆದರೆ, ಆತ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ ಎಂದು ಧಾರವಾಡ ಶಹರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಶ್ರೀಧರ ಸತಾರೆ […]