ಅಪರಾಧ

ಧಾರವಾಡದಲ್ಲಿ ಇರಾನಿ ಗ್ಯಾಂಗ್‌ನ ಮೂವರು ಕಳ್ಳರ ಬಂಧನ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ  ಸರಗಳ್ಳತನ ಹಾಗೂ ಕೈ ಚಳಕ ತೋರುತ್ತಿದ್ದ ಇರಾನಿ ಗ್ಯಾಂಗ್‌ನ ಮೂವರು ಕಳ್ಳರನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಳ್ಳರನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿ ಮೂಲದ ಅಲಿರಜಾ ಇರಾನಿ, ಬೀದರನ ಚಿದರಿ ರೋಡ್ ನಿವಾಸಿ ಬಿಲಾಲ ಇರಾನಿ ಮತ್ತು ಮಧ್ಯಪ್ರದೇಶದ ಗುಲಾಮ‌ಅಲಿ ಇರಾನಿ ಎಂದು ಗುರುತಿಸಲಾಗಿದೆ. ಅಲ್ಲದೆ, ಬಂಧಿತರಿಂದ ಕೆಟಿಎಂ ಬೈಕ್, ಚಿನ್ನಾಭರಣ, ಮೂರು ಮೊಬೈಲ್ ಸೇರಿ 1.44 ಲಕ್ಷ ಮೌಲ್ಯದ ವಸ್ತು-ಆಭರಣ ಜಪ್ತಿ ಮಾಡಲಾಗಿದೆ. ಈ […]

ಅಪರಾಧ

ಧಾರವಾಡ : ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಪುಂಡರ ಗುಂಪು ಹಲ್ಲೆ  

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ಯುವಕನೊಬ್ಬನ ಮೇಲೆ ಪುಂಡರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಯುವಕನೊಬ್ಬನ ಮೇಲೆ ಮತ್ತೊಂದು ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಇಲ್ಲಿನ ಲಕ್ಷ್ಮಿಸಿಂಗನಕೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶಿವು ಲಮಾಣಿ ಎಂಬ ಯುವಕನ ಮೇಲೆ ನಾಲ್ಕೈದು ಜನರ ತಂಡವೊಂದು ಏಕಾಏಕಿ ರಾಡ್ ಹಾಗೂ ಬಡಿಗೆಗಳಿಂದ ಹಲ್ಲೆ ಮಾಡಿದೆ. ಇದರಿಂದ ಶಿವು ಎಂಬ ಯುವಕನಿಗೆ ತಲೆ, ಕೈ ಹಾಗೂ ಕಾಲಿನ ಭಾಗಗಳಿಗೆ ಪೆಟ್ಟಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಧಾರವಾಡ […]

ಅಪರಾಧ

ಧಾರವಾಡದಲ್ಲಿ ಬ್ಯಾಟ್ ಖರೀದಿಸಿ ಹಣ ಕೊಡದೆ ಆತನನ್ನೇ ತಳ್ಳಿ ಕೊಂದ ಖದೀಮರು ಅಂದರ್…!  

ಧಾರವಾಡ prajakiran.com : ಖರೀದಿಸಿದ ಬ್ಯಾಟ್ ಗೆ ಹಣ ಕೊಡದೆ ಖದೀಮರು ಆತನ ಪ್ರಾಣಪಕ್ಷಿಯನ್ನೇ ಕಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರಿ ಧಾರವಾಡದ ಗಾಂಧಿ ನಗರದ ಪುಟ್ ಪಾತ್ ಮೇಲೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವುದಕ್ಕಾಗಿ ಮಹಾರಾಷ್ಟ್ರದಿಂದ ಬಂದಿದ್ದ ಬ್ಯಾಟ ತಯಾರಿಸಿ ಮಾರುವ ಕುಟುಂಬದ ಯುವಕನೊಬ್ಬ ಈ ಖದೀಮರ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಮೃತನನ್ನು  ಮಹಾರಾಷ್ಟ್ರ ದ ಮಂಗಲ ನತ್ತು ಮೋರೆ  (21) ಎಂದು ಗುರುತಿಸಲಾಗಿದೆ. ಇತನ ಬಳಿ ಬ್ಯಾಟ್ ಖರೀದಿಸಿದ ತಡಸಿನಕೊಪ್ಪ ಗ್ರಾಮದ […]

ಅಪರಾಧ

ಲಾಕ್‌ಡೌನ್ ಉಲ್ಲಂಘಿಸಿದ  ಧಾರವಾಡ ಕಾಂಗ್ರೆಸ್ ಮುಖಂಡರ ವಿರುದ್ದ ದೂರು ದಾಖಲು

ಧಾರವಾಡ prajakiran.com : ಕರೋನಾ ಲಾಕ್‌ಡೌನ್ ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಜನುಮ ದಿನಕ್ಕಾಗಿ ಬೃಹತ್ ಪೆಂಡಾಲ್ ಹಾಕಿ, ಸಮಾರಂಭ ಆಯೋಜಿಸಿದ್ದ ಧಾರವಾಡ ಕಾಂಗ್ರೆಸ್ ಮುಖಂಡರ ವಿರುದ್ದ ದೂರು ದಾಖಲು  ಆಗಿದೆ. ಈ ಘಟನೆ ವಿದ್ಯಾನಗರಿ ಧಾರವಾಡದ ತಡಸಿನಕೊಪ್ಪದಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಈ ಕಾರ್ಯಕ್ರಮ ನಡೆಯುವ ಮುನ್ನವೇ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ಘಟನಾ ಸ್ಥಳದ ಮೇಲೆ ದಾಳಿ ನಡೆಸಿ   ಪೆಂಡಾಲ್  ಹಾಗೂ ಸೌಂಡ್ ಬ್ಯಾಕ್ಸ್ ಸೀಜ್ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ, […]