ಧಾರವಾಡ prajakiran.com : ಧಾರವಾಡದ ಬಿಜೆಪಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದ ಮೂರನೇ ಅಧಿಕ ವಿಶೇಷ ಹಾಗೂ ಸಿಬಿಐ ನ್ಯಾಯಾಲಯಕ್ಕೆ ಮಂಗಳವಾರ ಅವರ ವಕೀಲರಾದ ಭರತ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲಯ ಕೆಲವು ನಿಯಮಗಳನ್ನು ಅಳವಡಿಸಿಕೊಂಡಿದ್ದು, ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನು ಒಂದು ದಿನ ಕಾಯ್ದಿಟ್ಟು, ಸ್ಯಾನಿಟೈಜ್ ಮಾಡಿದ ನಂತರವೇ ನೋಂದಣಿ ಮಾಡಲಾಗುತ್ತದೆ. ೨೪ ಗಂಟೆಗಳ […]
Tag: # dharwad zp bjp member yogishgouda
ವಿನಯ್ ಕುಲಕರ್ಣಿ ಜೈಲು ಸೇರುತ್ತಿದ್ದಂತೆ ತೀವ್ರಗೊಂಡ ಸಿಬಿಐ ತನಿಖೆ : ಸಿಬಿಐ ಪ್ರಶ್ನೆಗಳಿಗೆ ತಬ್ಬಿಬಾದ ಬಸವರಾಜ್ ಮುತ್ತಗಿ ಆಂಡ್ ಗ್ಯಾಂಗ್
ಧಾರವಾಡ Prajakiran.com : ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲು ಸೇರುತ್ತಿದ್ದಂತೆ ಸಿಬಿಐ ತನಿಖೆ ಇನ್ನಷ್ಟು ತೀವ್ರಗೊಂಡಿದೆ. ನಿನ್ನೆ ಒಂದೇ ದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಮೂರು ಬಾರಿ ಬುಲಾವ್ ಕೊಟ್ಟಿದೆ. ಸಿಬಿಐ ವಿಚಾರಣೆಗೆ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ ಪ್ರತ್ಯೇಕವಾಗಿ ಮೂರು ಬಾರಿ ವಿಚಾರಣೆ ಎದುರಿಸಿರುವುದು ತೀವ್ರ ಸ್ವರೂಪದ ತನಿಖೆ ತೋರಿಸುತ್ತದೆ. ಸಿಬಿಐ ಕೇಳಿದ ಹತ್ತು ಹಲವು ಪ್ರಶ್ನೆಗಳಿಗೆ ತಬ್ಬಿಬಾದ ಬಸವರಾಜ ಮುತ್ತಗಿ ಕೆಲ ಕಾಲ ಅವರ ಎದುರು ಎನೂ ಹೇಳಬೇಕು […]
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿರೋ ಸಿಬಿಐ ತನಿಖೆ
ಹುಬ್ಬಳ್ಳಿ prajakiran.com : ಯೋಗೇಶಗೌಡ ಹತ್ಯೆ ಪ್ರಕರಣ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿದೆ. ಈ ಕೊಲೆ ಪ್ರಕರಣದಲ್ಲಿ ಈವರೆಗೆ 600ಕ್ಕಿಂತ ಹೆಚ್ಚು ಜನರ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಬಿಐ ಹಲವು ಮಹತ್ವದ ಅಂಶಗಳನ್ನು ಪತ್ತೆಹಚ್ಚಿದೆ ಎನ್ನಲಾಗಿದೆ. ಯೋಗಿಶಗೌಡ ಕೊಲೆ ನಡೆದ ವೇಳೆ ದೆಹಲಿಯಲ್ಲಿರೋದಾಗಿ ದಾಖಲೆ ಸೃಷ್ಟಿ ಮಾಡಿದ್ದ ಕುರಿತು ವಿನಯ ಕುಲಕರ್ಣಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ಕೊಡಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ನಿನ್ನೆ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಸೋಮು […]
ಧಾರವಾಡ ಪೊಲೀಸ್ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸಿಬಿಐ ನ್ಯಾಯಾಲಯಕ್ಕೆ ವರ್ಗಾವಣೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸಿಬಿಐ ನ್ಯಾಯಾಲಯದ ಮುಂದೆ ವರ್ಗಾವಣೆಗೊಂಡಿದೆ. ಅ.೨೨ರಂದು ಗುರುವಾರ ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಎದುರು ಸಿಬಿಐ ಪರ ವಿಶೇಷ ಅಭಿಯೋಜಕರು ಪ್ರತಿವಾದ ಮಂಡಿಸಿ, ಸದರಿ ಪೊಲೀಸ್ ಇನ್ಸೆಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಸೆಕ್ಷನ್ 201 ಮತ್ತು ಭ್ರಷ್ಟಾಚಾರ ನಿಷೇಧ […]
ಧಾರವಾಡ ಪೊಲೀಸ್ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.೨೨ರಂದು
ಧಾರವಾಡ prajakiran.com : ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶಗೌಡಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.೨೨ರಂದು ಗುರುವಾರಕ್ಕೆ ಮುಂದೂಡಲಾಯಿತು. ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಈ ಹಿಂದೆ ಅ.15ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಇಂದು ಅ.೨೦ಕ್ಕೆ ಮುಂದೂಡಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲವು […]
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ : ಸಿಬಿಐ ವಿಚಾರಣೆ ವೇಳೆ ರಾಜಿ ಸಂಧಾನ ಬಯಲು….!?
ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ದಿನವಿಡಿ ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರನ್ನು ಸಿಬಿಐ ಅಧಿಕಾರಿಗಳು ಸತತ ಆರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಡ್ರಿಲ್ ನಡೆಸಿದ ಸಿಬಿಐ […]
ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ವಿಜಯ ಕುಲಕರ್ಣಿ ಸಿಬಿಐ ವಿಚಾರಣೆ
ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಬೆಂಗಳೂರಿನ ಸಿಬಿಐ ಕಚೇರಿಯಲ್ಲಿಯೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ ಕುಲಕರ್ಣಿಯವರ ಸಿಬಿಐ ವಿಚಾರಣೆ ಆರಂಭವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಈಗಾಗಲೇ ಹಲವರನ್ನು ತೀವ್ರ ವಿಚಾರಣೆಗೆ […]