ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತಂತೆ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವರ ಹಲವು ಆಪ್ತರನ್ನು ವಿಚಾರಣೆಗೆ ಒಳಪಡಿಸಿದೆ. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಗೆ ಕರೆಸಿಕೊಂಡು ಹಲವು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿ ಮಹತ್ವದ ಸಾಕ್ಷ್ಯ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. ವಿನಯಕುಲಕರ್ಣಿಯವರು ಸಚಿವರಾಗಿದ್ದ ವೇಳೆ ಆಪ್ತ ಕಾರ್ಯದರ್ಶಿಯಾಗಿದ್ದ ಕೆ ಎ ಎಸ್ ಅಧಿಕಾರಿ ಸೋಮು ನ್ಯಾಮಗೌಡರ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. […]
Tag: # dharwad zp member yogishgouda murder case cong leader
ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ವಿಚಾರಣೆ ನಡೆಸಿದ ಸಿಬಿಐ
ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳ ತಂಡ ಅಂದು ರಾಜ್ಯದ ಗೃಹ ಸಚಿವರಾಗಿದ್ದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರನ್ನು ವಿಚಾರಣೆಗೊಳಪಡಿಸಿ, ಮಹತ್ವದ ಮಾಹಿತಿಯನ್ನು ಸಂಗ್ರಹಿಸಿದೆ. ಅ. 10ರಂದು ಶನಿವಾರ ಬೆಂಗಳೂರಿನ ಡಾ. ಜಿ. ಪರಮೇಶ್ವರ ಅವರ ಮನೆಯಲ್ಲಿಯೇ ಒಂದು ಗಂಟೆಗೂ ಅಧಿಕ ಕಾಲ ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ. ಈ ವೇಳೆ ಅವರು ಅಂದು ನೀಡಿದ್ದ ಭೂ ವಿವಾದ ಹಿನ್ನಲೆಯಲ್ಲಿ […]