ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ನಿರ್ದೇಶಕರಾಗಿ ಮಮತಾ ನಾಯಕ ಅಧಿಕಾರ ಸ್ವೀಕಾರ

ಧಾರವಾಡ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕಶೈಕ್ಷಣಿಕ ವಲಯದ ಆಯುಕ್ತರ ಕಚೇರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನೂತನ ನಿರ್ದೇಶಕರಾಗಿ ಕೆ.ಇ.ಎಸ್. ಹಿರಿಯ ಶ್ರೇಣಿ ಅಧಿಕಾರಿ ಮಮತಾ  ನಾಯಕ  ಶನಿವಾರ ಅಧಿಕಾರ ಸ್ವೀಕರಿಸಿದರು. ೧೯೯೪ರಲ್ಲಿ ಕೆ.ಇ.ಎಸ್. ತೇರ್ಗಡೆಯಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಅಲಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸರಕಾರಿ ಸೇವೆ ಆರಂಭಿಸಿದರು.  ನಗರದ ಡಯಟ್ ಉಪನ್ಯಾಸಕರಾಗಿ ಸೇವೆಸಲ್ಲಿಸಿ, ಬಿಇಓ ಹುದ್ದೆಗೆ ಪದೋನ್ನತಿ ಹೊಂದಿ ಕಾರವಾರ ತಾಲೂಕಿನ ಬಿಇಓ ಆಗಿ ಸೇವೆ ಸಲ್ಲಿಸಿದರು.  ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ, ಧಾರವಾಡ ಡಯಟ್ ಉಪಪ್ರಾಚಾರ್ಯರಾಗಿ ಸೇವೆಗೈದಿದ್ದಾರೆ. ಡಿಡಿಪಿಐ ಹುದ್ದೆಗೆ ಪದೋನ್ನತಿ ಪಡೆದು, ಬೆಳಗಾವಿಯ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ(ಸಿಟಿಇ)ದ ಸಮಾನಾಂತರ ಹುದ್ದೆಯಲ್ಲಿ ರೀಡರ್ ಆದರು. ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಮತ್ತು ಹಾವೇರಿ ಜಿಲ್ಲೆಯ ಆಡಳಿತ ಉಪನಿರ್ದೇಶಕರಾಗಿ ಸೇವೆಸಲ್ಲಿಸಿದ್ದಾರೆ. ಜಂಟಿ ನಿರ್ದೇಶಕರ ಹುದ್ದೆಗೆ ಪದೋನ್ನತಿ ಹೊಂದಿ ಬೆಳಗಾವಿಯ ಸಿಟಿಇ ಪ್ರಾಚಾರ್ಯರಾಗಿ ಮತ್ತು ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.  […]

ರಾಜ್ಯ

ಧಾರವಾಡದ ಶಿಕ್ಷಣ ಇಲಾಖೆಯ ೧೧ ಲಿಪಿಕ ನೌಕರರಿಗೆ ಬಡ್ತಿ ನೀಡಿದ ಮೇಜರ್ ಸಿದ್ದಲಿಂಗಯ್ಯ

ಧಾರವಾಡ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಧಾರವಾಡದ ಅಪರ್ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ೧೧ ಜನ ಲಿಪಿಕ ನೌಕರರಿಗೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಬಡ್ತಿ ನೀಡಲಾಯಿತು. ಗೆಜೆಟೆಡ್ ಮ್ಯಾನೇಜರ್ ಹುದ್ದೆಯಿಂದ ಗೆಜೆಟೆಡ್ ಅಸಿಸ್ಟಂಟ್(ಜಿಎ) ಹುದ್ದೆಗೆ ವ್ಹಿ.ಜಿ. ಬದಾಮಿ ಹಾಗೂ ಎಸ್.ಎಂ. ಕೋಟಿ ಅವರಿಗೆ ಬಡ್ತಿ ನೀಡಲಾಯಿತು. ಉಳಿದಂತೆ ಅಧೀಕ್ಷಕರ ಹುದ್ದೆಯಿಂದ ಗೆಝೆಟೆಡ್ ಮ್ಯಾನೇಜರ್ ಹುದ್ದೆಗೆ ಒಟ್ಟು ೯ ಜನರಿಗೆ ಬಡ್ತಿ ಕೊಡಲಾಯಿತು. ಅಪರ್ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಬಡ್ತಿ ಆದೇಶ ಪತ್ರ ವಿತರಿಸಿ […]

ರಾಜ್ಯ

ಶಿಕ್ಷಕರು ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ವಿದ್ಯಾರ್ಥಿಗಳನ್ನು ಸಂಪರ್ಕಿಸಿ

ಧಾರವಾಡ prajakiran.com : ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ನೀಡಬೇಕು ಎಂದು ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕಿ ಮಮತಾ ನಾಯಕ ಹೇಳಿದರು.  ಅವರು ಮಂಗಳವಾರ ನಗರದ ಡಯಟ್‌ನ ಡೆಪ್ಯೂಟಿ ಚೆನ್ನಬಸಪ್ಪ ಸಮಾವೇಶ ಭವನದಲ್ಲಿ ಜಿಲ್ಲಾ ಮಟ್ಟದ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ವಿದ್ಯಾಗಮ ಯೋಜನೆಯು ಬೇರೆ ರಾಜ್ಯಗಳಲ್ಲಿಯೂ ಇದೀಗ ಅನುಷ್ಠಾನವಾಗುತ್ತಿರುವುದು ಬಹಳ ಹೆಮ್ಮೆಯ ವಿಷಯ ಎಂದರು. ಪ್ರತೀ ವಾರ […]

ಜಿಲ್ಲೆ

ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾಗಮ ಅನುಷ್ಠಾನ ವೀಕ್ಷಣೆ   

 ಧಾರವಾಡ prajakiran.com : ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಮಮತಾ ನಾಯಕ ಸೋಮವಾರ ವೀಕ್ಷಣೆ ಮಾಡಿದರು.  ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ವಿದ್ಯಾಗಮ ಕಾರ್ಯಕ್ರಮದ ಅನುಷ್ಠಾನದ ಕುರಿತು ಸಮಗ್ರ ಮಾಹಿತಿಯನ್ನು ಪಡೆದು ಮಾರ್ಗದರ್ಶನ ಮಾಡಿದರು. ನಂತರ ಧಾರವಾಡ ಗ್ರಾಮೀಣ ವಲಯದ ಕೆಜಿಎಸ್ ನರೇಂದ್ರ ಹಾಗೂ ಜಿಹೆಚ್‌ಎಸ್ ಚಿಕ್ಕಮಲ್ಲಿಗವಾಡ ಶಾಲೆಗಳ ವೀಕ್ಷಣೆ ಮಾಡಿದರು. ಗ್ರಾಮೀಣ ಮಕ್ಕಳು ಬಹಳ ಉತ್ಸಾಹದಿಂದ ಕಲಿಕಾ ಕೇಂದ್ರಗಳಲ್ಲಿ ಭಾಗವಹಿಸಿರುವುದು ಹಾಗೂ ಊರಿನ ಜನರ […]

ರಾಜ್ಯ

ಧಾರವಾಡ ಜಿಲ್ಲೆಯ ಮಕ್ಕಳಿಗಾಗಿ ಕರೋನಾ ಚಿತ್ರಕಲಾ ಸ್ಪರ್ಧೆ

 ಧಾರವಾಡ prajakiran.com : ಜಿಲ್ಲೆಯಾದ್ಯಂತ ಕೊರೋನಾ ರೋಗ ನಿಯಂತ್ರಣದ ಜಾಗೃತಿಗಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗಾಗಿ ಆನ್‌ಲೈನ್ ಮೂಲಕ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯುತ್ತಮ ಚಿತ್ರಕಲಾ ಕೃತಿಗಳನ್ನು ರಚಿಸಿದ ೧೦ ವಿದ್ಯಾರ್ಥಿಗಳ ಜೊತೆಗೆ ಜಿಲ್ಲಾಧಿಕಾರಿಗಳು ಉಪಹಾರ ಸೇವಿಸಿ ಅವರನ್ನು ಅಭಿನಂದಿಸಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರಾದ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಆಡಳಿತದ ಜೊತೆಗೂಡಿ ಈ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು […]