ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳದ ಪ್ರವಾಹಕ್ಕೆ ಸಿಲುಕಿ ನೀರಿನಲ್ಲಿ ತೇಲಿ ಹೋದ ಬಲ್ಲರವಾಡ ಗ್ರಾಮದ ಎರಡು ರೈತ ಕುಟುಂಬಗಳಿಗೆ ರಾಜ್ಯ ಸರಕಾರ ಹಾಗೂ ಧಾರವಾಡ ಜಿಲ್ಲಾಡಳಿತ ಒಂದು ತಿಂಗಳು ಕಳೇದರೂ ಈವರೆಗೆ ಪರಿಹಾರ ನೀಡಿಲ್ಲ. ಘಟನೆ ನಡೆದು ಒಂದು ತಿಂಗಳು ಕಳೆದರೂ ಸಹ ಧಾರವಾಡ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವುದು ದುರಂತವೇ ಸರಿ. ಅಲ್ಲದೇ ಶಾಸಕರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರ ಒಳಿತು ಬಯಸದೇ ಬೇಜವಾಬ್ದಾರಿ ತೋರುತ್ತಿರುವದು ಸರಿಯಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ […]
Tag: flood
ಧಾರವಾಡ ಜಿಲ್ಲೆಯ ಬೆಳೆಹಾನಿ ಪರಿಶೀಲನೆ
ಅತಿವೃಷ್ಟಿ ಹಾನಿ ಅಧ್ಯಯನ ಧಾರವಾಡ prajakiran.com : ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು. ಕೇಂದ್ರ ಕೃಷಿ ಹಾಗೂ ರೈತರ ಸಹಕಾರ ಮಾರುಕಟ್ಟೆ ಮಂತ್ರಾಲಯದ ಎಣ್ಣೆಬೀಜ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಮನೋಹರನ್ ಹಾಗೂ ಕೇಂದ್ರ ಜಲಶಕ್ತಿ ಮಂತ್ರಾಲಯದ ಅಧೀಕ್ಷಕ ಇಂಜಿನಿಯರ್ ಗುರುಪ್ರಸಾದ್ ಜೆ. ಅವರನ್ನೊಳಗೊಂಡ ಎರಡನೇ ತಂಡವನ್ನು ಹಾರೋಬೆಳವಡಿ ಗ್ರಾಮದ ಬಳಿ ಸವದತ್ತಿ- ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆ ಬಳಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ […]
ಗದಗ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ
ಗದಗ prajakiran.com : ಮಲಪ್ರಭಾ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ ರಾಜವೇಣಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಅಧೀಕ್ಷಕ ಅಭಿಯಂತರ ಸದಾನಂದ ಬಾಬು ಅವರ ತಂಡ ಜಿಲ್ಲೆಯ ಕೊಣ್ಣೂರು, ಲಖಮಾಪುರ, ವಾಸನ ಗ್ರಾಮಗಳಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಮೊದಲಿಗೆ ಕೊಣ್ಣೂರು ಸಮೀಪದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿ […]
ಬೆಣ್ಣೆಹಳ್ಳದಲ್ಲಿ ತೇಲಿ ಹೋದ ರೈತ ಕುಟುಂಬಗಳಿಗೆ ಪರಿಹಾರ ನೀಡಿ
ಹುಬ್ಬಳ್ಳಿ prajakiran.com : ಹೆಬಸೂರ ಹತ್ತಿರ ಬೆಣ್ಣೆ ಹಳ್ಳಕ್ಕೆ ಕೊಚ್ಚಿಹೋದ ರೈತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನವಲಗುಂದ ಮಾಜಿ ಶಾಸಕ ಎನ್.ಹೆಚ್.ಕೋನರಡ್ಡಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದ ಹತ್ತಿರ ಇರುವ ಹೆಬಸೂರ-ಬೆನ್ನೂರ ದಾರಿ ಮೂಲಕ ಬಲ್ಲರವಾಡ ಗ್ರಾಮದ ರೈತರು ತಮ್ಮ ಜಮೀನುಗಳಿಗೆ ಹೋಗುವಾಗ ಬೆಣ್ಣೆಹಳ್ಳಕ್ಕೆ ಕೊಚ್ಚಿಹೋದ ಅಣ್ಣಿಗೇರಿ ತಾಲೂಕಿನ ಬಲ್ಲರವಾಡ ಗ್ರಾಮದ ರೈತ ದೇವೆಂದ್ರಪ್ಪ ಮಾದರ ಹಾಗೂ ಶ್ರೀಕಾಂತ ಇನಾಮತಿ ಅವರ ಕುಟುಂಬದ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಹೇಳಿದರು. ಆ. […]
ಬೆಳಗಾವಿ, ಬಾಗಲಕೋಟೆಯ ಪ್ರವಾಹ ಪ್ರೀಡಿತ ಪ್ರದೇಶಗಳ ವೈವಾನಿಕ ಸಮೀಕ್ಷೆ
ಬೆಳಗಾವಿ/ ಬಾಗಲಕೋಟೆ prajakiran.com : ಉತ್ತರಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಸಂಭವಿಸಿದ ಅಪಾರ ಹಾನಿಯ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ನಡೆಸಿದರು. ಬೆಳಗಾವಿಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ಪ್ರದೇಶಗಳ ವಸ್ತುಸ್ಥಿತಿಯನ್ನು ಕಣ್ಣಾರೆ ಕಂಡರು. ಜನರಿಗೆ ಆದಅಪಾರ ಹಾನಿ ಕುರಿತು ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಪಡೆದುಕೊಂಡರು. ಇದಕ್ಕು ಮುನ್ನ ಬೆಳಗಾವಿಯಲ್ಲಿಧಾರವಾಡ, ಬೆಳಗಾವಿ ಹಾಗೂ ಇತರ ಜಿಲ್ಲೆಗಳ ಅಧಿಕಾರಿಗಳ […]
ಕೊನೆಗೂ ಎಚ್ಚೆತ್ತ ಧಾರವಾಡ ಜಿಲ್ಲಾಡಳಿತ
ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಧಾರವಾಡ prajakiran.com : ತುಪ್ಪರಿಹಳ್ಳದ ಪ್ರವಾಹದಲ್ಲಿ ತೇಲಿಹೋದ ಹಾರೋಬೆಳವಡಿಯ ರೈತ ಮಡಿವಾಳಪ್ಪ ಜಕ್ಕಣ್ಣವರ ಅವರ ತಂದೆ ನಾಗಪ್ಪ ಅವರಿಗೆ 5 ಲಕ್ಷ ಮೊತ್ತದ ಪರಿಹಾರದ ಚೆಕ್ ಅನ್ನು ಭಾನುವಾರ ಧಾರವಾಡ ಜಿಲ್ಲಾಡಳಿತ ಕೊನೆಗೂ ಹಸ್ತಾಂತರಿಸಿ, ಅವರ ಕಣ್ಣೀರು ಒರೆಸುವ ಕೆಲಸ ಮಾಡಿದೆ. ತುಪರಿಹಳ್ಳದಲ್ಲಿ ಕೋಚ್ಚಿ ಹೋದ ರೈತ 56 ದಿನ ಕಳೆದರೂ ನಾಪತ್ತೆ, ಹಿರಿಯ ಜೀವಗಳ ಕಣ್ಣೀರು ಒರೆಸದ ಜಿಲ್ಲಾಡಳಿತ ಎಂದು ಈ ಕುರಿತು ಪ್ರಜಾಕಿರಣ.ಕಾಮ್ ಸಮಗ್ರ ವರದಿ ಪ್ರಕಟಿಸಿತ್ತು. […]
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಪ್ರವಾಹ ಭೀತಿ…!?
ಬೆಳಗಾವಿ prajakiran.com : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿ ತಟದಲ್ಲಿರುವ ಬೆಳಗಾವಿ ಜಿಲ್ಲೆಯ ನದಿ ಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದೆ. ಅದರಲ್ಲೂ ರಾಮದುರ್ಗ ತಾಲೂಕಿನ 20ಕ್ಕೂ ಅಧಿಕ ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಮುಳುಗಡೆ ಭೀತಿಯಲ್ಲಿಯೇ ಜನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಕಾಲಕಳೆಯುತ್ತಿದ್ದಾರೆ. ಇದೇ ವೇಳೆ ತಾಲೂಕಿನ ಕಿಲ್ಲಾ ತೋರಗಲ್ ಗ್ರಾಮದ ಶೆಟ್ಟಮ್ಮ ದೇವಿ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿದೆ. ರೈತರು ಬೆಳೆದ ನೂರಾರು ಎಕರೆ ಬೆಳೆಗಳು ಜಲಾವೃತಗೊಂಡಿವೆ. Share on: WhatsApp
ರಾಯಚೂರಿನ ಕರಕಲ್ ಗಡ್ಡಿ ಯಲ್ಲಿ ಸಿಲುಕಿಕೊಂಡ 9 ಜನ …!
ರಾಯಚೂರು prajakiran.com : ಭಾರೀ ಮಳೆಯಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿರುವ 9 ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬರುವ ಪ್ರಯತ್ನ ಹಾಗೂ ಗ್ರಾಮಸ್ಥರ ಮನವೊಲಿಕೆ ವಿಫಲವಾದ ಘಟನೆ ರಾಯಚೂರಿನ ಕರಕಲ್ ಗಡ್ಡಿಯಲ್ಲಿ ಗುರುವಾರ ನಡೆದಿದೆ. ರಾಯಚೂರಿನ ಕರಕಲ್ ಗಡ್ಡಿ ಜನ ಶಾಶ್ವತ ಪರಿಹಾರಕ್ಕೆ ಪಟ್ಟು ಹಿಡಿದಿದ್ದರ ಪರಿಣಾಮಅವರನ್ನು ಕರೆದುಕೊಂಡು ಬರಲು ತೆರಳಿದ್ದ ಬೋಟ್ ಬರಿಗೈಯಲ್ಲಿ ವಾಪಾಸ್ ಆಯಿತು. ರಾಯಚೂರು ಜಿಲ್ಲಾಡಳಿತ ಕಳೆದ ವರ್ಷವೂ ಈ ರೀತಿಯ ಭರವಸೆ ನೀಡಿ ಕೈ ಕೊಟ್ಟಿತ್ತು. ಮತ್ತೇ ಈ ವರ್ಷ ಪ್ರವಾಹ ಬಂದಾಗ […]
ಬಾದಾಮಿ ಪ್ರವಾಹ ಸಂಕಷ್ಟ : ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿ
ಬೆಂಗಳೂರು prajakiran.com : ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿಧಾನ ಸಭಾಕ್ಷೇತ್ರ ಬಾದಾಮಿ ಜನತೆ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕರೋನಾ ಸೋಂಕಿನ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಅವರು ಕ್ಷೇತ್ರಕ್ಕೆ ಆಗಮಿಸುವಂತಿಲ್ಲ. ಈ ಕುರಿತು ಸ್ವತಃ ಟ್ವೀಟ್ ಮಾಡಿದ್ದಾರೆ. ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ […]
ಧಾರವಾಡ ಜಿಲ್ಲೆಯ ಸಾವಿರಾರು ಎಕರೆ ಬೆಳೆ ತುಪರಿಹಳ್ಳದ ಪಾಲು
ಧಾರವಾಡ prajakiran.com : ಪ್ರವಾಹದ ಹೊಡೆತಕ್ಕೆ ಸಿಲುಕಿ ನಲಗುತ್ತಿರುವ ಧಾರವಾಡ ಜಿಲ್ಲೆಯ ರೈತರು ಬೆಳೆದಿದ್ದ ಸಾವಿರಾರು ಎಕರೆ ಬೆಳೆ ತುಪರಿಹಳ್ಳದ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದೆ. ಆದರೆ, ಅವರ ನೆರವಿಗೆ ಧಾವಿಸಬೇಕಾದ ಆಳುವ ಸರ್ಕಾರಗಳು ಮಾತ್ರ ಗಾಢವಾದ ನಿದ್ರೆಗೆ ಜಾರಿವೆ. ಎದೆಯುದ್ದ ಬೆಳೆದು ನಿಂತ ಪೈರು ನೀರು ಪಾಲಾದ ರೈತನ ಕಣ್ಣಲ್ಲಿ ನೀರು ಬತ್ತಿ ಹೋಗಿದ್ದು, ಯಾರಿಗೂ ತನ್ನ ಸಂಕಟಅರ್ಥವಾಗುತ್ತಿಲ್ಲ ಎಂದು ರಕ್ತ ಮಾತ್ರ ಕೊತ ಕೊತ ಕುದಿಯುತ್ತಿದೆ. ಹೌದು ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಹಾಗೂ […]