ಅಪರಾಧ

ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ

ಹಾಸನ prajakiran.com : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಜಿಲ್ಲೆಯ ಜನತೆ ಮತ್ತೆ ಬೆಚ್ಚಿಬಿದ್ದಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ದ ದಂಪತಿಯನ್ನು ಮುರುಳೀಧರ್ , ಉಮಾದೇವಿ ಎಂದು ಗುರುತಿಸಲಾಗಿದೆ. ಇಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವೃದ್ದ ದಂಪತಿಗಳಿಗೆ‌ ಮಕ್ಕಳು ಇರಲಿಲ್ಲ. 80 ಎಕರೆ ಜಮೀನು ಹೊಂದಿದ್ದ ಮುರುಳೀಧರ್ ಹಾಗೂ ಉಮಾದೇವಿ ದಂಪತಿ ಇಬ್ಬರು ತೋಟದ ಮನೆಯಲ್ಲಿ ವಾಸವಿದ್ದರು. ಮುರುಳೀಧರ್ […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 53 ಜನರಿಗೆ ಕರೋನಾ, ಇಬ್ಬರ ಸಾವು

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಶನಿವಾರ ಮತ್ತೇ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 53 ಜನರಿಗೆ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 845 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಇದುವರೆಗೆ 544 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 275 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಇಂದು […]

ರಾಜ್ಯ

ಕಿಲ್ಲರ್ ಕರೋನಾಕ್ಕೆ ಹಾಸನದಲ್ಲಿ ಭಾನುವಾರ ಇಬ್ಬರು ಸಾವು

ಹಾಸನ prajakiran.com : ಜಿಲ್ಲೆಯಲ್ಲಿ ಭಾನುವಾರ ಸಹ ಕೋವಿಡ್ 19 ಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಹಾಸನ ನಗರದ 57 ವರುಷದ ಪುರುಷ ಹಾಗೂ ಆಲೂರು ತಾಲ್ಲೂಕಿನ 45 ವರ್ಷದ ಮಹಿಳೆ ಸೋಂಕಿನಿಂದ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನ‌ ನಗರದ 57 ವರ್ಷದ ಸೋಂಕಿತ ವ್ಯಕ್ತಿ ಜು 5ರಂದು ನಗರದ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು 10 ರಂದು ಐ.ಸಿ.ಯು ನಲ್ಲಿ ಇರಿಸಿ ವೆಂಟಿಲೇಟರ್ ಸೌಲಭ್ಯ […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗೆ ಪಾಸಿಟೀವ್

ಹಾಸನ :  ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಶಾಲೆಯಲ್ಲಿ ಶನಿವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಒಬ್ಬ ವಿದ್ಯಾರ್ಥಿಗೆ ಪಾಸಿಟೀವ್ ಬಂದಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಣದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ  ಮಾತನಾಡಿ, ಈ ಕುರಿತು ವಿವರ ನೀಡಿದರು. ಇಂದು ಪತ್ತೆಯಾದ 16 ಪ್ರಕರಣಗಳಲ್ಲಿ ಇಬ್ಬರು ಹಾಸನ ತಾಲ್ಲೂಕಿನವರು, ಮೂವರು ಅರಕಲಗೂಡು ತಾಲ್ಲೂಕಿನವರಾಗಿದ್ದು, ಆರು ಜನ ಅರಸೀಕೆರೆ ತಾಲ್ಲೂಕಿನವರು, ನಾಲ್ವರು ಹೊಳೆನರಸೀಪುರ ತಾಲ್ಲೂಕಿಗೆ ಸೇರಿದವರಾಗಿದ್ದಾರೆ  ಕೆ.ಆರ್.ನಗರದಿಂದ ಶಸ್ತ್ರ ಚಿಕಿತ್ಸೆಗೆಂದು […]