ಜಿಲ್ಲೆ

ಧಾರವಾಡ ಜಿಲ್ಲೆಯ ಹೋಂ ಐಸೋಲೇಶನ್ ಅಯೋಮಯ…!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹಳ್ಳಿಯಲ್ಲಿ ಹೋಂ ಐಸೋಲೇಶನ್ ಚಿಕಿತ್ಸೆಗೆ ಮುಂದಾಗಿರುವವರ ಪರಿಸ್ಥಿತಿ  ಅಯೋಮಯವಾಗಿದೆ. ಅವರ ನೋವಿಗೆ ಸ್ಪಂದಿಸುವ ಕೆಲಸದಲ್ಲಿ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿಲ್ಲ. ಬದಲಿಗೆ ಸಂಪೂರ್ಣ ವಿಫಲವಾಗಿದೆ. ನಗರದ ಜನತೆ ಅದರಲ್ಲೂ ಅಕ್ಷರಸ್ಥರು,  ಉಳ್ಳವರು ಹೇಗು ನಿಭಾಯಿಸಿಕೊಳ್ಳುತ್ತಾರೆ. ಆದರೆ ರೈತರ ಸ್ಥಿತಿ ಚಿಂತಾಜನಕವಾಗಿದೆ. ಹಳ್ಳಿಗಳಲ್ಲಿಯ ಆಶಾಕಾರ್ಯಕರ್ತರು ಪ್ರತಿ ನಿತ್ಯ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಣೆ ಮಾಡುತ್ತಾರೆ. ಆದರೆ ಅವರ ಬಳಿ ಗುಳಿಗೆ ಕೊರತೆ ಇದೆ. ಸಮಯಕ್ಕೆ ಸರಿಯಾಗಿ ಮಾತ್ರೆಗಳು ಸರಬರಾಜು ಆಗುತ್ತಿಲ್ಲ ಎಂಬದೂರುಗಳಿವೆ. ಇದರಿಂದಾಗಿ […]

ರಾಜ್ಯ

ಸೋಂಕು ಲಕ್ಷಣ ರಹಿತರಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ

ಧಾರವಾಡ prajakiran.com : ಕೋವಿಡ್ ಸೋಂಕು ದೃಢಪಟ್ಟಿದ್ದರು ಕೂಡಾ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣಗಳಿರುವವರಿಗೆ ಆರೋಗ್ಯ ತಂಡದಿಂದ ನಡೆಸಲಾಗುವ ಪ್ರಾಥಮಿಕ ಪರಿಶೀಲನೆ ಹಾಗೂ ಟ್ರಯೇಜ್ ಶಿಫಾರಸ್ಸು ಆಧರಿಸಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ ನೀಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯ ತಿಳಿಸಿದೆ. ಈ ಕುರಿತು ಮಾರ್ಗಸೂಚಿ ಪ್ರಕಟಿಸಿರುವ ಆಯುಕ್ತಾಲಯವು ಪ್ರತ್ಯೇಕವಾಗಿರಲು ಮನೆಯು ಸೂಕ್ತವಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಪ್ರತ್ಯೇಕತೆಯ ಅವಧಿಯಲ್ಲಿ ವ್ಯಕ್ತಿಯನ್ನು ದೈನಂದಿನ ಅನುಸರಣೆ ಮಾಡಲು ಟೆಲಿ ಕನ್ಸಲ್ಟೇಶನ್ ಸಂಪರ್ಕ ಸ್ಥಾಪಿಸಲಾಗುವುದು. […]