ರಾಜ್ಯ

ಧಾರವಾಡದಲ್ಲಿ ಒಂಬತ್ತು ದಿನಗಳ ಬಳಿಕ ಸೀಲ್ ಡೌನ್ ಗೆ ಬಂದ ಸಿಬ್ಬಂದಿ

ಧಾರವಾಡ prajakiran.com  :  ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ  ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್‌ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]

ರಾಜ್ಯ

ಧಾರವಾಡದ ಸಂಗೊಳ್ಳಿ ರಾಯಣ್ಣ ನಗರ ಸೀಲ್ ಡೌನ್… !

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  ಇದರಿಂದಾಗಿ ಬಡಾವಣೆಗಳ ಸೀಲ್ ಡೌನ್ ಕೂಡ ಹೆಚ್ಚುತ್ತಲೇ ಇದೆ. ಮೊನ್ನೆ 35, ನಿನ್ನೆ 47 ಇಂದು ಎಷ್ಟು ಎಂಬ ಪ್ರಶ್ನೆ ಚರ್ಚೆ ನಡೆಯುತ್ತಿರುವಾಗಲೇ ಕರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿದ್ಯಾನಗರಿ ಧಾರವಾಡದ ಹಲವೆಡೆ ಸೀಲ್ ಡೌನ್ ಮಾಡಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಸೀಲ್ ಡೌನ್ ಕೈಗೊಳ್ಳುತ್ತಿದ್ದಾರೆ. ಶುಕ್ರವಾರ ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದಲ್ಲಿರುವ ಸೋಂಕಿತ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವೈದ್ಯನಿಗೆ ಧರ್ಮದೇಟು….!?

ಹುಬ್ಬಳ್ಳಿ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವೈದಾಧಿಕಾರಿಯೊಬ್ಬರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲದೆ, ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಡಾ. ಪ್ರಭು ಬಿರಾದಾರ ಎಂಬಾತನೇ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ವೈದ್ಯನಾಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆ ಹಾಗೂ ಅವರ ಕುಟುಂಬಸ್ಥರು ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ವೈದ್ಯನಿಗೆ ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಹಾನಗರ ಪಾಲಿಕೆಯ ಆಸ್ಪತ್ರೆ ಆವರಣದಲ್ಲಿಯೇ ವೈದ್ಯನಿಗೆ ಶುಕ್ರವಾರ ತಡರಾತ್ರಿ […]