ಅಪರಾಧ

ಹುಬ್ಬಳ್ಳಿ ಪೊಲೀಸರಿಂದ ಭೂಗತ ಪಾತಕಿ ಬಚ್ಚಾಖಾನ್ ತೀವ್ರ ವಿಚಾರಣೆ

ರೌಡಿಶೀಟರ್ ಫ್ರೂಟ್ ಇರ್ಫಾನ್ ಶೂಟೌಟ್ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಹುಬ್ಬಳ್ಳಿ prajakiran.com : ಧಾರವಾಡದ ನಟೋರಿಯಸ್ ರೌಡಿಶೀಟರ್ ಫ್ರೂಟ್ ಇರ್ಫಾನ್ ಶೂಟೌಟ್ ಪ್ರಕರಣದ ತನಿಖೆಯನ್ನು ಹುಬ್ಬಳ್ಳಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಕರೆತಂದು ವಿಚಾರಣೆ ನಡೆಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಡಿಸಿಪಿ ಪಿ. ಕೃಷ್ಣಕಾಂತ, ಹಳೆ ಹುಬ್ಬಳ್ಳಿ ಪೊಲೀಸ ಇನ್ಸಪೆಕ್ಟರ್ ಶಿವಾನಂದ ಕಮತಗಿ,  ಕೊಲೆಯ ಸೂತ್ರದಾರಿ ಎನ್ನಲಾದ ಭೂಗತ ಲೋಕದ ಪಾತಕಿ ಸೈಯದ್ ಸುಲೇಮಾನ್ ಬಚ್ಚಾಖಾನ್ ನನ್ನ […]

ಅಪರಾಧ

ಹುಬ್ಬಳ್ಳಿ ಪೊಲೀಸರ ಬಲೆಗೆ ಬಿದ್ದ ಇಬ್ಬರು ಚಾಲಕಿ ಕಳ್ಳರು

ಹುಬ್ಬಳ್ಳಿ prajakiran.com : ಗ್ರಾಹಕರ ಸೋಗಿನಲ್ಲಿ ಪ್ರತಿಷ್ಠಿತ ಚಿನ್ನದ ಮಳಿಗೆಗಳಿಗೆ ಭೇಟಿ ನೀಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣಗಳನ್ನು ಎಗರಿಸುತ್ತಿದ್ದ ಇಬ್ಬರು ಚಾಲಕಿ ಕಳ್ಳರನ್ನ ಹುಬ್ಬಳ್ಳಿಯ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಧಾರವಾಡದ ವಿರಕ್ತಾನ ಕಟಗಿ ಹಾಗೂ ಗದಗನ ಶರತ ಶ್ರೀಕಾಂತ ಕಾರಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 3.98 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತ ಮಾಡಲಾಗಿದೆ. ಮೂರು ದಿನದ ಹಿಂದೆ ಈ ಇಬ್ಬರು ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಕಲ್ಯಾಣ ಜುವೇಲರ್ಸಗೆ ಭೇಟಿ ನೀಡಿದ್ದರು. ಮುಖಕ್ಕೆ‌ಮಾಸ್ಕ್ ಧರಿಸಿ […]

ಅಪರಾಧ

ಮಾಜಿ ಶಾಸಕ ಹಾಲಹರವಿ ಪುತ್ರ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ prajakiran.com : ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಪುತ್ರ ಸೂರಜ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಸೂರಜ್ ತನ್ನ ಕೋಣೆಯಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸದಾ ಲವಲವಿಕೆಯಿಂದ ಓಡಾಡಿಕೊಂಡಿದ್ದ ಸೂರಜ್ ಸಾವು ಕುಟುಂಬಸ್ಥರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.ಅವರ ಆಕ್ರಂದನ ಮುಗಿಲು ಮುಟ್ಟಿದೆ. ಮಂಗಳವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡರಿಗೆ ಹಾಗೂ ಸ್ಥಳೀಯರಿಗೆ ಆಘಾತ […]

dist hospital dharwad
ರಾಜ್ಯ

ಧಾರವಾಡದ ಮಾಳಾಪುರ, ಬಾರಾಕೋಟ್ರಿ, ಬನಶ್ರೀನಗರ, ಹಿರೇಮಠ ಓಣಿ, ಜಯನಗರಕ್ಕೂ ಕರೋನಾ

ಒಟ್ಟು 10736 ಕೋವಿಡ್  ಪ್ರಕರಣಗಳು : 8132 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ  290 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10736 ಕ್ಕೆ ಏರಿದೆ. ಇದುವರೆಗೆ 8132 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2297 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 307 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು:* ಮಾಳಾಪುರ,ಬಾರಾಕೋಟ್ರಿ,ಬನಶ್ರೀ […]

ರಾಜ್ಯ

ಕೋವಿಡಗೆ ಹುಬ್ಬಳ್ಳಿ-ಧಾರವಾಡ ನಿವೃತ್ತ ಎಸಿಪಿ ಬಲಿ….!

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಳವಾಗುತ್ತ ಸಾಗಿದೆ. ಹುಬ್ಬಳ್ಳಿ-ಧಾರವಾಡ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಎಂ.ವಿ ನಾಗನೂರುಅವರು ಕೋವಿಡ್ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಅವರು ನಿನ್ನೇ ರಾತ್ರಿ ಸಾವನ್ನಪ್ಪಿದ್ದಾರೆ. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳಲು ಅವರಿಗೆ ಕಿಮ್ಸ್ ನಲ್ಲಿ  ಪಾಸ್ಲಾ ಚಿಕಿತ್ಸೆ ಕೋಡಲು ತಯಾರಿ  ನಡೆದಿತ್ತು. ಒಬ್ಬ ಪ್ಲಾಸ್ಮಾ ದಾನಿ ಮುಂದೆ ಬಂದರೂ ಅವರ ಹಿಮೋಗ್ಲೋಬಿನ್ […]