ಧಾರವಾಡ prajakiran.com : ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಹೆಸರಿನಲ್ಲಿ ಧಾರವಾಡದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮಾಜಿ ಸಚಿವರ ಆಪ್ತನೊಬ್ಬ ಸೇರಿ ಇಬ್ಬರು ಹುಬ್ಬಳ್ಳಿ-ಧಾರವಾಡ ಪೊಲೀಸರ ಬಲೆಗೆ ಭಾನುವಾರ ರಾತ್ರಿ ಬಿದ್ದಿದ್ದಾರೆ. ಧಾರವಾಡದ ಕಮಲಾಪುರದಲ್ಲಿ ಕಳೆದ ಹಲವು ದಿನಗಳಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿರುವ ಮಾಹಿತಿಯ ಆಧಾರದ ಮೇಲೆ ಅದರ ಬೆನ್ನು ಹತ್ತಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಪಿ. ಕೃಷ್ಣಕಾಂತ, ಆರ್.ಬಿ. ಬಸರಗಿ, ಎಸಿಪಿ ಅನುಷಾ ಜಿ., ಸಿಸಿಬಿ ಇನ್ಸಪೆಕ್ಟರ್ ಗಳಾದ […]