ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಜೆಡಿಎಸ್ ಬೆಂಬಲ

ಹುಬ್ಬಳ್ಳಿ prajakiran.com : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲಿಸಲಿದೆ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಘೋಷಿಸಿದರು. ಅವರು ಶುಕ್ರವಾರ ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ಪ್ರಕಟಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಯ ಮತದಾರರನ್ನ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದರು. ದೇವೆಗೌಡರು, ಕುಮಾರಸ್ವಾಮಿ ಸೂಚನೆ ಮೆರೆಗೆ ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದರು. […]