ರಾಜ್ಯ

ಹಿರಿಯ ಪೊಲೀಸ್ ಅಧಿಕಾರಿ ಜಿನೇಂದ್ರ ಖಣಗಾವಿ ವಿಚಾರಣೆ ನಡೆಸಿದ ಸಿಬಿಐ

ಬೆಂಗಳೂರು prajakiran.com :  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರವೂ ಹಿರಿಯ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸಿದರು. ಅಂದು ಹುಬ್ಬಳ್ಳಿ ಧಾರವಾಡ ಡಿಸಿಪಿಯಾಗಿದ್ದ ಹಾಗೂ ಸದ್ಯ ರಾಮನಗರ ಪೊಲೀಸ್ ತರಬೇತಿ ಶಾಲೆ ಮುಖ್ಯಸ್ಥರಾಗಿರುವ ಜಿನೇಂದ್ರ ಖಣಗಾವಿಅವರನ್ನು ವಿಚಾರಣೆ ನಡೆಸಿದರು. ಅವರು ಯೋಗೀಶಗೌಡ ಗೌಡರ ಕೊಲೆಯಾದ ದಿನದಂದು 2016ರ ಜೂನ್ 15ರಂದು   ಹುಬ್ಬಳ್ಳಿ ಧಾರವಾಡ ಡಿಸಿಪಿಯಾಗಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಬೆಳಗ್ಗೆಯಿಂದ ತೀವ್ರ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. […]