ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಪ್ರವಾಹ ಭೀತಿ…!?

ಬೆಳಗಾವಿ prajakiran.com : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿ ತಟದಲ್ಲಿರುವ ಬೆಳಗಾವಿ ಜಿಲ್ಲೆಯ ನದಿ ಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದೆ. ಅದರಲ್ಲೂ ರಾಮದುರ್ಗ ತಾಲೂಕಿನ  20ಕ್ಕೂ ಅಧಿಕ ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ಮುಳುಗಡೆ ಭೀತಿಯಲ್ಲಿಯೇ ಜನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಕಾಲಕಳೆಯುತ್ತಿದ್ದಾರೆ. ಇದೇ ವೇಳೆ ತಾಲೂಕಿನ ಕಿಲ್ಲಾ ತೋರಗಲ್ ಗ್ರಾಮದ ಶೆಟ್ಟಮ್ಮ ದೇವಿ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿದೆ. ರೈತರು ಬೆಳೆದ ನೂರಾರು ಎಕರೆ ಬೆಳೆಗಳು ಜಲಾವೃತಗೊಂಡಿವೆ. Share on: WhatsApp