ರಾಜ್ಯ

ನಮ್ಮನ್ನು ಯಾರೂ ಸಂಪರ್ಕಿಸಿಲ್ಲ‌, ನಾವೂ ಯಾರನ್ನೂ ಸಂಪರ್ಕಿಸಿಲ್ಲ.

ಹುಬ್ಬಳ್ಳಿ  prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆಗೆ ಯತ್ನಿಸುತ್ತಿರುವ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಧಾರವಾಡ ಉಸ್ತುವಾರಿ ಸಚಿವ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಮ್ಮನ್ನು ಯಾರೂ ಸಂಪರ್ಕಿಸಿಲ್ಲ‌, ನಾವೂ ಯಾರನ್ನೂ ಸಂಪರ್ಕಿಸಿಲ್ಲ. ವಿನಯ ಕುಲಕರ್ಣಿ ಬಿಜೆಪಿ ಸೇರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ನುಣುಚಿಕೊಂಡಿದ್ದಾರೆ. ನಮ್ಮ ಪಾರ್ಟಿಗೆ ಸೇರ್ತಾರೋ, ಬಿಡ್ತಾರೋ ಏನೂ ಗೊತ್ತಿಲ್ಲ‌. ನಮ್ಮ ವರಿಷ್ಠರು ಕೂಡ ಈ ಬಗ್ಗೆ ನಮ್ಮ ಜೊತೆ ಚರ್ಚಿಸಿಲ್ಲ ಎಂದು […]

ರಾಜ್ಯ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೆ ಬರೋಬ್ಬರಿ ಕ್ಲಾಸ್ ತೆಗೆದುಕೊಂಡ ಶೆಟ್ಟರ್

ಹುಬ್ಬಳ್ಳಿ prajakiran.com : ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಅವ್ಯವಹಾರ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಅದರ ವಿರುದ್ದ ಕಣ್ಣುಮುಚ್ಚಿಕೊಂಡು ಕುಳಿತಿರುವುದು ನೋಡಿದರೆ ನಮಗೆ ನಾಚಿಕೆ ಆಗ್ತಿದೆ ಸ್ವಾಮಿ  ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ಆಗಿರುವ ಹಿರಿಯ ನಾಗರಿಕ ಎ. ಶೆಟ್ಟರ್ ಎಂಬುವವರು ಬರೋಬ್ಬರಿ 8.55 ನಿಮಿಷಗಳ ಕಾಲ ಕ್ಲಾಸ್ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶೆಟ್ಟರ್  ಅವರೇ ನಿಮಗೆ ನೋಡಿ ಜನ ಮತ ಹಾಕಿಲ್ಲ.ಅಟಲ್ ಬಿಹಾರಿ […]

ರಾಜ್ಯ

ಧಾರವಾಡದಲ್ಲಿ ೧೯೩ ಕ್ಕಿಂತ ಹೆಚ್ಚು ಕರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಧಾರವಾಡ prajakiran.com : ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸಿವೆ. ೧೯೩ ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿ, ತಮ್ಮ ಆಸ್ಪತ್ರೆಯ ಅರ್ಧದಷ್ಟು ಹಾಸಿಗೆಗಳನ್ನು ಒದಗಿಸಿವೆ. ಈಗಾಗಲೇ ೧೯೩ […]

ರಾಜ್ಯ

ಖಾಸಗಿ ಆಸ್ಪತ್ರೆಗಳ ಶೇ.೫೦ ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ  ಮೀಸಲು  

ಧಾರವಾಡ prajakiran.com : ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ತಮ್ಮ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಿಗೆ ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ನೀಡಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯ […]