ಧಾರವಾಡ prajakiran.com : ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಎರಡು ದಿನಗಳಲ್ಲಿ ಹೈಕಮಾಂಡ್ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಹೇಳಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಕೋರ್ ಕಮೀಟಿಯಲ್ಲಿ ಚರ್ಚಿಸಿ ಈಗಾಗಲೇ ಕೇಂದ್ರಕ್ಕೆ ಅಭ್ಯರ್ಥಿಗಳ ಹೆಸರು ಕಳುಹಿಸಿದ್ದೇವೆ. ಆದ್ದರಿಂದ ಇನ್ನೆರಡು ದಿನಗಳಲ್ಲಿ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು. ವಿಧಾಪರಿಷತ್ ಚುನಾವಣೆಗೆ ನಾವು ಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತದಾರರು […]