ರಾಜ್ಯ

ಪಾಕಿಸ್ತಾನ, ನಮ್ಮ ಜೀನ್ಸ್ ಒಂದೇ ಎಂದ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ….!

ಧಾರವಾಡ prajakiran.com : ಕರೋನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿವೆ ಎಂದು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಈ ಯಡವಟ್ಟು ಮಾಡಿಕೊಂಡಿದ್ದಾರೆ.  ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಪ್ರತಿನಿತ್ಯ 70 ಸಾವಿರ ಕರೋನಾ ಕೇಸ್ […]

ರಾಜ್ಯ

ಧಾರವಾಡದ ಚಿಕ್ಕಮಲ್ಲಿಗವಾಡ, ಮಿಶ್ರಿಕೋಟಿ, ಅಮರಗೋಳ, ಯಮನೂರಲ್ಲೂ ಕರೋನಾ

ಈವರೆಗೆ 9666 ಕೋವಿಡ್  ಪ್ರಕರಣ : 6977 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ  204  ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಲಕ್ಷ್ಮೀ ನಾರಾಯಣ ಗುಡಿ […]

ಅಪರಾಧ

ಧಾರವಾಡ ಜಿಲ್ಲೆಯಲ್ಲಿ ಮತ್ತೋಂದು ಲೈಂಗಿಕ ದೌರ್ಜನ್ಯ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ಮಾದನಬಾವಿ, ಬೋಗೂರು ಅತ್ಯಾಚಾರ ಪ್ರಕರಣಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಗ್ರಾಮದ ಅಪ್ರಾಪ್ತೆಯ ಮೇಲೆ  ನಡೆದಿರುವ ಪ್ರಕರಣ ಇದಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ 13 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ನಡೆಸಲಾಗಿದೆ. ಅದೇ ಗ್ರಾಮದ ಸಂತೋಷ ಮಂಟೂರ (22) ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ ಎಂದು ಪೋಷಕರು ನೀಡಿದ ದೂರಿನಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯ ಕಣವಿ ಹೊನ್ನಾಪುರ,ಶಲವಡಿ,ಗುಮ್ಮಗೋಳದಲ್ಲಿ ಕೋವಿಡ್

ಧಾರವಾಡ ಜಿಲ್ಲೆಯಲ್ಲಿ 6925  ಕೋವಿಡ್ ಪ್ರಕರಣ  : 4337 ಜನ ಗುಣಮುಖ   ಧಾರವಾಡ prajakian.com :  ಜಿಲ್ಲೆಯಲ್ಲಿ ಗುರುವಾರ  ಕೋವಿಡ್ 257 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 6925 ಕ್ಕೆ ಏರಿದೆ. ಇದುವರೆಗೆ 4337 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2374 ಪ್ರಕರಣಗಳು ಸಕ್ರಿಯವಾಗಿವೆ.  34 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 214ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ಶಿವಗಿರಿ […]

ndrf team rescue operation
ರಾಜ್ಯ

ಧಾರವಾಡದಲ್ಲಿ ಹಾನಿಯಾದ ಮನೆ, ಬೆಳೆಗಳಿಗೆ ಶೀಘ್ರ ಪರಿಹಾರ

ಧಾರವಾಡ prajakiran.com : ಕಳೆದ ಎರಡು ಮೂರು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಇದರಿಂದಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಹಳಷ್ಟು ಮನೆಗಳಿಗೆ  ಮತ್ತು ಬೆಳೆ ಹಾನಿಯಾಗಿದೆ. ರಾಜ್ಯ ಸರಕಾರದಿಂದ ನಷ್ಟದ ಪರಿಹಾರ  ನೀಡಲು  ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು    ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಹೇಳಿದರು. ಅವರು ಭಾನುವಾರ ನವಲಗುಂದ ತಾಲೂಕಿನ ಯಮನೂರ ಹತ್ತಿರದ ಬೆಣ್ಣಿ ಹಳ್ಳದಲ್ಲಿ ಎನ್.ಡಿ.ಆರ್.ಎಫ್. ತಂಡ ನಡೆಸಿದ ಜೀವರಕ್ಷಣೆ ಕುರಿತ ಅಣಕು ಪ್ರದರ್ಶನ ವೀಕ್ಷಣೆ ಮಾಡಿ  ಮಾತನಾಡಿದರು. ನವಲಗುಂದಕ್ಕೆ […]