ಅಂತಾರಾಷ್ಟ್ರೀಯ

ಕೃಷಿ ಕಾಯ್ದೆಗಳ ಜಾರಿ ನೀವು ತಡೆಯುತ್ತೀರೊ, ಇಲ್ಲವೇ ನಾವೇ ತಡೆಯಬೇಕೊ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ರೈತರ ಬೇಡಿಕೆ ಆಲಿಸಲು ಸಮಿತಿ ರಚನೆ ನವದೆಹಲಿ prajakiran.com : ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌. ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ […]