ರಾಜ್ಯ

ನವಲಗುಂದ ರೈತರ ಹುತಾತ್ಮ ದಿನಕ್ಕೆ ೫ ಕ್ಕೂ ಹೆಚ್ಚು ಜನ ಸೇರುವಂತಿಲ್ಲ

ಧಾರವಾಡ prajakiran.com : ಕೋವಿಡ್-೧೯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಿಆರ್‌ಪಿಸಿ ೧೯೭೩ ರ ಕಲಂ ೧೪೪ ಮೇರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜುಲೈ ೨೧ ರಂದು ನವಲಗುಂದದಲ್ಲಿ ನಡೆಯುವ ರೈತ ಹುತಾತ್ಮ ದಿನಾಚರಣೆಯಲ್ಲಿ ಐದಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಸೂಚಿಸಿದ್ದಾರೆ. ಯಾವುದೇ ಸಭೆ ಸಮಾರಂಭ, ಭಾಷಣ ಆಯೋಜಿಸಬಾರದು. ಹುತಾತ್ಮ ರೈತರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವವರು ಪ್ರತ್ಯೇಕವಾಗಿ ಒಬ್ಬೊಬ್ಬರೇ ಬಂದು ಸಾಮಾಜಿಕ ಅಂತರ  ಕಾಪಾಡಿಕೊಂಡು ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ […]