ರಾಜ್ಯ

ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಇನ್ಸಪೆಕ್ಟರ್ : ಸಿಬಿಐಗೆ ತಕರಾರು ಸಲ್ಲಿಸಲು ಕಾಲಾವಕಾಶ

ಧಾರವಾಡ prajakiran.com : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಅಂದಿನ ಉಪನಗರ ಪೊಲೀಸ್ ಠಾಣೆ ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಹೈಕೋರ್ಟ್ ಮೆಟ್ಟಿಲು ಹತ್ತಿದೆ. ಬುಧವಾರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಎಕ ಸದಸ್ಯ ಪೀಠದ ನ್ಯಾಯಾಧೀಶರು, ಸಿಬಿಐಗೆ ತಕರಾರರು ಸಲ್ಲಿಸಲು ಕಾಲಾವಕಾಶ ನೀಡಿ, ಒಂದು ವಾರ ವಿಚಾರಣೆ ಮುಂದೂಡಿದೆ. ಯೋಗೀಶಗೌಡ ಕೊಲೆ ನಡೆದ ಸಂದರ್ಭದಲ್ಲಿ ಟಿಂಗರೀಕರ್ ಉಪನಗರ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ […]