ಅಂತಾರಾಷ್ಟ್ರೀಯ

ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಸಂಚಲನ…!

ನವದೆಹಲಿ prajakiran.com : ಕರ್ನಾಟಕದ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿರುವುದು ರಾಜಕೀಯ ಸಂಚಲನ ಸೃಷ್ಟಿಸಿದೆ. ಬಿಜೆಪಿ ಸೇರಲು ಪ್ರಮುಖ ಕಾರಣ ಪಕ್ಷ ಸಾಮಾನ್ಯ ಜನರೊಂದಿಗೆ ನಿಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ ದೇಶದಲ್ಲಿ ಹೊಸ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ಸೇರ್ಪಡೆಗೊಂಡಿದ್ದೇನೆ. ಅಲ್ಲದೆ, ರಾಜಕೀಯದಲ್ಲಿ ಯುವಕರಅವಶ್ಯಕತೆ ಇದೆ ಎಂಬುದನ್ನು ಮನಗಂಡು ಸೇರಿದ್ದೇನೆ ಎಂದರು. ಪೊಲೀಸ್ ಕಾರ್ಯವೈಖರಿ ಬೇರೆ, ನೀತಿ ನಿಯಮಗಳ ವಿಷಯ ಬಂದಾಗ ರಾಜಕೀಯ ಸೇರುವುದು ಅನಿವಾರ್ಯ ವಾಗಿತ್ತು.  ಸಾಮಾಜಿಕ ವ್ಯವಸ್ಥೆ […]