ರಾಜ್ಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ನಲ್ಲಿ ಬೆಂಕಿ

ಹುಬ್ಬಳ್ಳಿ prajakiran.com ; ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿಯ ಶೆರೆವಾಡ್ ಕ್ರಾಸ್ ಬಳಿಯ ವಿಭವ ಕಾರ್ಖಾನೆಯಲ್ಲಿ ಶಾಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ನಿರ್ಮಾಣ ವಾಗಿತ್ತು. ಕೆಲ ಕಾರ್ಮಿಕರು ಬೆಂಕಿ ಕಂಡು ಹೌಹಾರಿದರು. ಚೀರಾಟ, ಕೂಗಾಟ ಕೇಳಿಬಂದವು ಎನ್ನಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರಗಡೆ ಕರೆತರಲಾಯಿತು ಎಂದು ಹೇಳಲಾಗಿದೆ. ವಿಭವ […]

ಅಂತಾರಾಷ್ಟ್ರೀಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು. ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ […]

ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದೆ ಸಭೆಗೆ ಬಂದ ಅಧಿಕಾರಿಗೆ ಕೇಂದ್ರ‌ ಸಚಿವರಿಂದ ಬಿಸಿ

ಧಾರವಾಡ prajakiran.com :  ಕರೋನಾ ಭೀತಿಯಿಂದ ಎಲ್ಲರೂ ತತ್ತರಿಸಿಹೋಗಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಹೊರತಾಗಿಲ್ಲ. ಯಾರಾದರೂ ಮಾಸ್ಕ್ ಧರಿಸದೆ ಬಂದರೆ ಇಲ್ಲವೇ ಮನವಿ ಕೊಡಲು ಬಂದರೆ ಆ ಮನವಿ ಪತ್ರಕ್ಕೆ ಕೇಂದ್ರ ಸಚಿವರು ಸ್ಯಾನಟೈಸರ್ ಸಿಂಪಡಿಸಿ ಮನವಿ ಪತ್ರ ಸ್ವೀಕರಿಸುತ್ತಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ ಅಧಿಕಾರಿಗೆ ಕೇಂದ್ರ‌ ಸಚಿವ ಪ್ರಲ್ಹಾದ ಜೋಶಿ ಬಿಸಿ ತಾಕಿಸಿದರು. ಹಲವು ತಿಂಗಳ ಬಳಿಕ […]

ರಾಜ್ಯ

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ

ಧಾರವಾಡ prajakiran.com :  ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-೧೯ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.  ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ   ಮಾತನಾಡಿದರು.  ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ […]

ರಾಜ್ಯ

ಸಚಿವ ಜಾರಕಿಹೊಳಿ, ಮಾಧುಸ್ವಾಮಿ ವಿರುದ್ದ ಕೇಂದ್ರ ಸಚಿವ ಜೋಶಿ ಅಸಮಾಧಾನ

ಧಾರವಾಡ prajakiran.com :  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು 2023 ರ ಚುನಾವಣೆ ವಿಚಾರ ಪ್ರಸ್ತಾಪಿಸಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರ  ಕೋವಿಡ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ. ನಾವಂತು ನಮ್ಮ‌ ಕೆಲಸವನ್ನ ಮಾಡುತ್ತಿದ್ದೇವೆ. ಅವರು ಯಾವ ಅರ್ಥದಲ್ಲಿ ಎನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಸಮಜಾಯಿಸಿ ನೀಡಿದರು. ಆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ.ಈಗ ಆದ್ಯತೆ ಇರೋದು ಕರೊನಾ ನಿಯಂತ್ರಣಕ್ಕೆ ರಾಜಕೀಯಕ್ಕೆ‌ಅಲ್ಲ ಎಂದು ನುಣಿಚಿಕೊಂಡರು. ಆ ಮೂಲಕ ಸಚಿವ […]

ರಾಜ್ಯ

ಬಿಆರ್‌ಟಿಎಸ್ ವೈಫಲ್ಯ : ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ ವಿರುದ್ದ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಜಾರಿಗೆ ತಂದಿರುವ ಬಿಆರ್‌ಟಿಎಸ್ ಯೋಜನೆ, ನೆನೆಗುದಿಗೆ ಬಿದ್ದ ಬೈ ಪಾಸ್ ನಿರ್ಮಾಣ, ಗುಜರಾತ್ ನವರಿಗೆ ಯುಜಿಡಿ ಕಾಮಗಾರಿ ಹೀಗೆ ಅನೇಕ ಯೋಜನೆಗಳು ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳಿಗೆ ಕಿಕ್ ಬ್ಯಾಕ್ ನೀಡುವ ಯೋಜನೆಗಳಾಗಿವೆ ಹೊರತು ಜನರಿಗೆ ಉಪಯೋಗವಾಗಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು. ಅವರು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 600 ಕೋಟಿ ರೂ. ವೆಚ್ಚದಲ್ಲಿದ್ದ ಈ ಯೋಜನೆ ಸಿದ್ಧವಾಗಿದ್ದು, ಅದು 1200 ಕೋಟಿ […]