ರಾಜ್ಯ

ಪಾಕಿಸ್ತಾನ, ನಮ್ಮ ಜೀನ್ಸ್ ಒಂದೇ ಎಂದ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ….!

ಧಾರವಾಡ prajakiran.com : ಕರೋನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿವೆ ಎಂದು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಈ ಯಡವಟ್ಟು ಮಾಡಿಕೊಂಡಿದ್ದಾರೆ.  ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಪ್ರತಿನಿತ್ಯ 70 ಸಾವಿರ ಕರೋನಾ ಕೇಸ್ […]

ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕರೊನಾ

ಬೆಂಗಳೂರು prajakiran.com : ಉತ್ತರಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಚಾಟಿ ಬೀಸಲು ಸಜ್ಜಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಈ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೋನಾ ತಗುಲಿರುವುದು ಕಾಂಗ್ರೆಸ್ ಕಟ್ಟಾಳುಗಳಿಗೆ ಹಾಗೂ ವಿಶೇಷವಾಗಿ ಅವರ ಬೆಂಬಲಿಗರ ಮನಸ್ಸಿಗೆ ಬೇಸರ ಉಂಟಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಿ ಪಕ್ಷ ಹಾಗೂ ನಾಡಿನ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಲಿ […]

ರಾಜ್ಯ

ಮಿಸ್ಟರ್ ಶಿವಕುಮಾರ್ ಯು ಆರ್ ಆನ್ ಬೇಲ್….!

ಹುಬ್ಬಳ್ಳಿ prajakiran.com : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದು, ಮಿಸ್ಟರ್ ಶಿವಕುಮಾರ್ ಯು ಆರ್ ಆನ್ ಬೇಲ್ ಎಂದು ತಿರುಗೇಟು ನೀಡಿದರು. ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೀವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಿಸ್ಟರ್ ಕಮಿಷನರ್ ಐ ವಿಲ್ ಸಿ ಯು ಅಂತೀರಾ. ಹಾಗಿದ್ದರೆ ನಾನು ನಿಮ್ಮನ್ನು ಹೇಳ್ತೇನಿ. ಮಿಸ್ಟರ್ ಶಿವಕುಮಾರ್ ಯು ಆರ್ ಆನ್ ಬೇಲ್ ಮರೆಯಬೇಡಿ, ನಿಮ್ಮ ಗುಂಡಾಗಿರಿ ನಡೆಯಲ್ಲ ಎಂದು ಕಡಕ್ […]

ಅಂತಾರಾಷ್ಟ್ರೀಯ

ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿಯಿಂದ ಗೌರವ

ಧಾರವಾಡ prajakiran.com : ಭಾರತೀಯ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿರುವ ಆಗಸ್ಟ್ 9 ರ ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಿಸುವ ಮೂಲಕ ತಮ್ಮ ಸರಳತೆ ಮೆರೆದಿದ್ದಾರೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನತೆಗೆ ಕ್ವಿಟ್  ಇಂಡಿಯಾ ಚಳುವಳಿಯ ವಿಶೇಷತೆಯನ್ನು ನೆನಪಿಸಿ ಗಮನ ಸೆಳೆದಿದ್ದಾರೆ. ಈ ಕುರಿತು ತಮ್ಮ ಕಚೇರಿಯಿಂದ  ಶಾಲು, ಹಾರ ಮತ್ತು ಸಂದೇಶಪತ್ರಗಳನ್ನು ಅವರಿಗೆ ತಲುಪಿಸಿ ಗೌರವಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿದ್ದರು. […]